ನವದೆಹಲಿ (ಪಿಟಿಐ): ‘ಮೈತ್ರಿ ಮಾತುಕತೆಯ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ನಮ್ಮ ಸಮಯವನ್ನು ವ್ಯರ್ಥಮಾಡಿದೆ’ ಎಂದು ಎಎಪಿಯ ಹಿರಿಯ ಮುಖಂಡ ಗೋಪಾಲ್ ರೈ ಆರೋಪಿಸಿದ್ದಾರೆ. ‘ದೆಹಲಿಯಲ್ಲಿ ಉಳಿದಿರುವ ಆರು ಲೋಕಸಭಾ ಕ್ಷೇತ್ರಗಳಿಗೆ ನಮ್ಮ ಅಭ್ಯರ್ಥಿಗಳು ಸೋಮವಾರ ನಾಮಪತ್ರ ಸಲ್ಲಿಸುವರು’ ಎಂದೂ ಅವರು ತಿಳಿಸಿದ್ದಾರೆ. ಹರಿಯಾಣದ ಮೂರು ಕ್ಷೇತ್ರಗಳಿಗೆ ಎಎಪಿ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಾಗಿದೆ. ಹರಿಯಾಣದಲ್ಲಿ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್ ಅವರು ಮೂರು ರ್ಯಾಲಿಗಳನ್ನು ಆಯೋಜಿಸಲಿದ್ದಾರೆ ಎಂದು ರೈ ತಿಳಿಸಿದರು.