ನವದೆಹಲಿ:ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಲಾದ ‘ಭಾರತ ರತ್ನ’ವನ್ನು ಹಿಂದಕ್ಕೆ ಪಡೆಯುವಂತೆ ದೆಹಲಿ ಸರ್ಕಾರ ಅಂಗೀಕರಿಸಿದ ನಿರ್ಣಯ ಆಮ್ ಆದ್ಮಿ ಹಾಗೂ ಕಾಂಗ್ರೆಸ್ ಪಕ್ಷಗಳ ಮೈತ್ರಿಗೆ ಹಿನ್ನಡೆಯಾಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಅಜಯ್ ಮಾಕೇನ್ ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಮಾಕೇನ್ಈ ಸಂಬಂಧ ಟ್ವೀಟ್ ಮಾಡಿದ್ದಾರೆ.ದೆಹಲಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು2019ರಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲುಮುಂದಾಗಿದ್ದರು.
ಮಾಕೇನ್ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಎಎಪಿ ನಾಯಕ ಹಾಗೂ ರಾಜ್ಯಸಭೆ ಸದಸ್ಯ ಎಂ.ಪಿ. ಸಂಜಯ್ ಸಿಂಗ್, ದೆಹಲಿ ವಿಧಾನಸಭೆಯಲ್ಲಿ ಒಂದೇ ಒಂದು ಸ್ಥಾನಗೆಲ್ಲಲಾಗದ ಪಕ್ಷದ ನಾಯಕರು ಇನ್ನೂ ಸೊಕ್ಕಿನಿಂದಲೇ ಇದ್ದಾರೆ. ಒಂದು ವೇಳೆ ಪಾಠ ಕಲಿಯದಿದ್ದರೆಹಾಗೂ ಇದೇ ನಡೆಯನ್ನು ಮುಂದುವರಿಸಿದರೆ, ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಕಳೆದುಹೋಗಲಿದೆ ಎಂದು ಕುಟುಕಿದ್ದಾರೆ.