ದೆಹಲಿ: ಗುಪ್ತಚರ ವಿಭಾಗದ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಅವರ ಹತ್ಯೆಗೆ ಸಂಬಂಧಿಸಿ ಎಎಪಿಯ ಕೌನ್ಸಿಲರ್ತಾಹಿರ್ಹುಸೇನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹತ್ಯೆಯ ಹಿಂದೆತಾಹಿರ್ ಕೈವಾಡ ಇದೆ ಎಂದು ಅಂಕಿತ್ ಅವರ ತಂದೆ ರವೀಂದ್ರ ಶರ್ಮಾ ಆರೋಪಿಸಿದ್ದಾರೆ.
ದೆಹಲಿ ಎಎಪಿ ಕಾರ್ಪೊರೇಟರ್ ತಾಹಿರ್ ಹುಸೇನ್ ಒಡೆತನದ ಕಟ್ಟಡದಲ್ಲಿ ಪತ್ತೆಯಾದ ಪೆಟ್ರೋಲ್ ಬಾಂಬ್ಗಳು
ತಾಹಿರ್ ಅವರ ಮಾಲೀಕತ್ವದ ಐದು ಅಂತಸ್ತಿನ ಕಟ್ಟಡದ ತಾರಸಿಯಿಂದ ಕಲ್ಲು ಮತ್ತು ಪೆಟ್ರೋಲ್ ಬಾಂಬ್ಗಳನ್ನು ಎಸೆಯಲಾಗಿದೆ ಎಂದು ಸ್ಥಳೀಯರೂ ಹೇಳಿದ್ದಾರೆ. ಹಿಂಸಾಚಾರದಲ್ಲಿತಾಹಿರ್ ಕೈವಾಡ ಇದೆ ಎಂದು ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಅವರೂ ಆರೋಪಿಸಿದ್ದಾರೆ.ತಾಹಿರ್ ವಿರುದ್ಧ ಕೊಲೆ ಮತ್ತು ಗಲಭೆ ಪ್ರಕರಣ ದಾಖಲಿಸಲಾಗಿದೆ.
ತಾಹಿರ್ ಒಡೆತನದ ಕಟ್ಟಡದಲ್ಲಿ ಪತ್ತೆಯಾದ ಆ್ಯಸಿಡ್ ಪೊಟ್ಟಣಗಳು
ಇದೇ ಹಿನ್ನೆಲೆಯಲ್ಲಿ ಎಎಪಿಯು ತಾಹಿರ್ ಹುಸೇನ್ನನ್ನುಪಕ್ಷ ಪ್ರಾಥಮಿಕ ಸದಸ್ಯತ್ವದಿಂದಅಮಾನತು ಮಾಡಿ ಗುರುವಾರ ರಾತ್ರಿ ಆದೇಶ ಹೊರಡಿಸಿದೆ.