ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ನಿವಾಸದಲ್ಲಿ ಪಕ್ಷದ ಮುಖಂಡರಾದ ಸಂಜಯ್ ಸಿಂಗ್ , ಮನಿಷ್ ಸಿಸೋಡಿಯಾ, ಪ್ರಶಾಂತ್ ಕಿಶೋರ್ ಸೇರಿದಂತೆ ಹಲವು ಮುಖಂಡರ ಜೊತೆ ಸಭೆ ನಡೆಸಿ ಭದ್ರತಾ ಕೊಠಡಿಯ ಸುತ್ತಮುತ್ತ ಸ್ವಯಂ ಸೇವಕರನ್ನು ನಿಯೋಜಿಸುವತೀರ್ಮಾನಕ್ಕೆ ಬಂದಿದ್ದಾರೆ. ಸ್ವಯಂ ಸೇವಕರು ಮಂಗಳವಾರ ಬೆಳಗಿನವರೆಗೂ ಪಾಳಿಯಲ್ಲಿ ಗಸ್ತು ತಿರುಗುವಂತೆ ನಿಯೋಜಿಸಲು ತೀರ್ಮಾನಿಸಲಾಯಿತು ಎನ್ನಲಾಗಿದೆ.