<p><strong>ನವದೆಹಲಿ: </strong>ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಬ್ಬರದ ಪ್ರಚಾರವೂ ಆಯಿತು, ಶನಿವಾರ ಮತದಾನವೂ ನಡೆಯಿತು. ಈಗ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ.</p>.<p>ಆದರೆ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಶನಿವಾರ ತಡರಾತ್ರಿಯವರೆಗೂ ಸಭೆ ನಡೆಸಿ ಮತಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಗಳ ಸುತ್ತ ಕಾವಲು ಕಾಯಲು ಪಕ್ಷದ ಸ್ವಯಂಸೇವಕರನ್ನು ನಿಯೋಜಿಸಲು ತೀರ್ಮಾನಿಸಿದ್ದಾರೆ.</p>.<p>ದೆಹಲಿಯಲ್ಲಿ 30 ಭದ್ರತಾ ಕೊಠಡಿಗಳಲ್ಲಿ ಮತಯಂತ್ರಗಳನ್ನು ಇರಿಸಲಾಗಿದೆ. ಇವುಗಳಲ್ಲಿ ದೆಹಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.</p>.<p>ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ನಿವಾಸದಲ್ಲಿ ಪಕ್ಷದ ಮುಖಂಡರಾದ ಸಂಜಯ್ ಸಿಂಗ್ , ಮನಿಷ್ ಸಿಸೋಡಿಯಾ, ಪ್ರಶಾಂತ್ ಕಿಶೋರ್ ಸೇರಿದಂತೆ ಹಲವು ಮುಖಂಡರ ಜೊತೆ ಸಭೆ ನಡೆಸಿ ಭದ್ರತಾ ಕೊಠಡಿಯ ಸುತ್ತಮುತ್ತ ಸ್ವಯಂ ಸೇವಕರನ್ನು ನಿಯೋಜಿಸುವತೀರ್ಮಾನಕ್ಕೆ ಬಂದಿದ್ದಾರೆ. ಸ್ವಯಂ ಸೇವಕರು ಮಂಗಳವಾರ ಬೆಳಗಿನವರೆಗೂ ಪಾಳಿಯಲ್ಲಿ ಗಸ್ತು ತಿರುಗುವಂತೆ ನಿಯೋಜಿಸಲು ತೀರ್ಮಾನಿಸಲಾಯಿತು ಎನ್ನಲಾಗಿದೆ.</p>.<p>ಕೆಲವರು ಬಬಾರ್ಪುರ್ ಎಂಬಲ್ಲಿ ಇವಿಎಂ ಯಂತ್ರದಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಕೇಳಿದ್ದೇವೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡ ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/delhi-election-arvind-kejriwal-exit-poll-703888.html" target="_blank">ದೆಹಲಿ ಚುನಾವಣೋತ್ತರ ಸಮೀಕ್ಷೆ: ಮರಳಿ ಅಧಿಕಾರಕ್ಕೆ ಅರವಿಂದ ಕೇಜ್ರಿವಾಲ್</a></p>.<p>ಅಲ್ಲದೆ, ಪಕ್ಷದಲ್ಲಿರುವ ಸ್ವಯಂ ಸೇವಕರು ದೆಹಲಿಯಲ್ಲಿ ಮತಯಂತ್ರಗಳನ್ನು ಇರಿಸಿರುವ 30 ಕೊಠಡಿಗಳ ಸುತ್ತ ಕಾವಲು ಕಾಯಲಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.</p>.<p>ಶನಿವಾರ ಮತದಾನ ನಡೆದಿದ್ದು, ಫೆ.11ರ ಮಂಗಳವಾರ ಮತಎಣಿಕೆ ನಡೆಯಲಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ 59ರಿಂದ 68 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ 5 ರಿಂದ 19 ಸ್ಥಾನಗಳನ್ನು ಪಡೆಯಬಹುದು ಎಂದು ಸಮೀಕ್ಷೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಬ್ಬರದ ಪ್ರಚಾರವೂ ಆಯಿತು, ಶನಿವಾರ ಮತದಾನವೂ ನಡೆಯಿತು. ಈಗ ಮತ ಎಣಿಕೆಯತ್ತ ಎಲ್ಲರ ಚಿತ್ತ ನೆಟ್ಟಿದೆ.</p>.<p>ಆದರೆ, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಶನಿವಾರ ತಡರಾತ್ರಿಯವರೆಗೂ ಸಭೆ ನಡೆಸಿ ಮತಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಗಳ ಸುತ್ತ ಕಾವಲು ಕಾಯಲು ಪಕ್ಷದ ಸ್ವಯಂಸೇವಕರನ್ನು ನಿಯೋಜಿಸಲು ತೀರ್ಮಾನಿಸಿದ್ದಾರೆ.</p>.<p>ದೆಹಲಿಯಲ್ಲಿ 30 ಭದ್ರತಾ ಕೊಠಡಿಗಳಲ್ಲಿ ಮತಯಂತ್ರಗಳನ್ನು ಇರಿಸಲಾಗಿದೆ. ಇವುಗಳಲ್ಲಿ ದೆಹಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.</p>.<p>ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ನಿವಾಸದಲ್ಲಿ ಪಕ್ಷದ ಮುಖಂಡರಾದ ಸಂಜಯ್ ಸಿಂಗ್ , ಮನಿಷ್ ಸಿಸೋಡಿಯಾ, ಪ್ರಶಾಂತ್ ಕಿಶೋರ್ ಸೇರಿದಂತೆ ಹಲವು ಮುಖಂಡರ ಜೊತೆ ಸಭೆ ನಡೆಸಿ ಭದ್ರತಾ ಕೊಠಡಿಯ ಸುತ್ತಮುತ್ತ ಸ್ವಯಂ ಸೇವಕರನ್ನು ನಿಯೋಜಿಸುವತೀರ್ಮಾನಕ್ಕೆ ಬಂದಿದ್ದಾರೆ. ಸ್ವಯಂ ಸೇವಕರು ಮಂಗಳವಾರ ಬೆಳಗಿನವರೆಗೂ ಪಾಳಿಯಲ್ಲಿ ಗಸ್ತು ತಿರುಗುವಂತೆ ನಿಯೋಜಿಸಲು ತೀರ್ಮಾನಿಸಲಾಯಿತು ಎನ್ನಲಾಗಿದೆ.</p>.<p>ಕೆಲವರು ಬಬಾರ್ಪುರ್ ಎಂಬಲ್ಲಿ ಇವಿಎಂ ಯಂತ್ರದಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಕೇಳಿದ್ದೇವೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಮುಖಂಡ ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/delhi-election-arvind-kejriwal-exit-poll-703888.html" target="_blank">ದೆಹಲಿ ಚುನಾವಣೋತ್ತರ ಸಮೀಕ್ಷೆ: ಮರಳಿ ಅಧಿಕಾರಕ್ಕೆ ಅರವಿಂದ ಕೇಜ್ರಿವಾಲ್</a></p>.<p>ಅಲ್ಲದೆ, ಪಕ್ಷದಲ್ಲಿರುವ ಸ್ವಯಂ ಸೇವಕರು ದೆಹಲಿಯಲ್ಲಿ ಮತಯಂತ್ರಗಳನ್ನು ಇರಿಸಿರುವ 30 ಕೊಠಡಿಗಳ ಸುತ್ತ ಕಾವಲು ಕಾಯಲಿದ್ದಾರೆ ಎಂದು ಸಿಂಗ್ ತಿಳಿಸಿದ್ದಾರೆ.</p>.<p>ಶನಿವಾರ ಮತದಾನ ನಡೆದಿದ್ದು, ಫೆ.11ರ ಮಂಗಳವಾರ ಮತಎಣಿಕೆ ನಡೆಯಲಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ 59ರಿಂದ 68 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ 5 ರಿಂದ 19 ಸ್ಥಾನಗಳನ್ನು ಪಡೆಯಬಹುದು ಎಂದು ಸಮೀಕ್ಷೆ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>