<p><strong>ನವದೆಹಲಿ:</strong> ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಹಾಸ್ಟೆಲ್ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಿರುವ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗುರುವಾರ ಪ್ರತಿಭಟನೆ ನಡೆಸಿದೆ.</p>.<p>ಮಂಡಿ ಹೌಸ್ನಿಂದ ಶಾಸ್ತ್ರೀ ಭವನದಲ್ಲಿರುವ ಮಾನವ ಸಂಪನ್ಮೂಲ ಸಚಿವಾಲಯದತ್ತ ಹೋಗುತ್ತಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ಮಾರ್ಗಮಧ್ಯದಲ್ಲೇ ತಡೆದಿದ್ದಾರೆ.</p>.<p>ಹಾಸ್ಟೆಲ್ ಶುಲ್ಕ ಹೆಚ್ಚಿಸಿರುವುದನ್ನು ಹಿಂಪಡೆಯಬೇಕು. ಅಷ್ಟೇ ಅಲ್ಲದೇ, ವಸ್ತ್ರಸಂಹಿತೆ, ಗ್ರಂಥಾಲಯದ ಓದಿನ ಸಮಯವನ್ನು ಕಡಿತಗೊಳಿಸಿರುವುದನ್ನೂ ಹಿಂಪಡೆಯಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.</p>.<p><span class="bold"><strong>ಶಿವಸೇನೆ ಖಂಡನೆ</strong></span></p>.<p><strong>ಮುಂಬೈ ವರದಿ:</strong> ಜೆಎನ್ಯು ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರ ‘ಅಮಾನವೀಯ’ ಲಾಠಿ ಪ್ರಹಾರವನ್ನು ಖಂಡಿಸಿ, ಮೋದಿ ನೇತೃತ್ವದ ಸರ್ಕಾರವನ್ನು ಶಿವಸೇನೆ ಗುರುವಾರ ತರಾಟೆಗೆ ತೆಗೆದುಕೊಂಡಿದೆ.</p>.<p>ಅಂಧ ವಿದ್ಯಾರ್ಥಿಗಳ ಮೇಲೂ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಯಾವ ಸರ್ಕಾರವೂ ಇಷ್ಟೊಂದು ಕ್ರೂರ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಹಾಸ್ಟೆಲ್ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಿರುವ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗುರುವಾರ ಪ್ರತಿಭಟನೆ ನಡೆಸಿದೆ.</p>.<p>ಮಂಡಿ ಹೌಸ್ನಿಂದ ಶಾಸ್ತ್ರೀ ಭವನದಲ್ಲಿರುವ ಮಾನವ ಸಂಪನ್ಮೂಲ ಸಚಿವಾಲಯದತ್ತ ಹೋಗುತ್ತಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ಮಾರ್ಗಮಧ್ಯದಲ್ಲೇ ತಡೆದಿದ್ದಾರೆ.</p>.<p>ಹಾಸ್ಟೆಲ್ ಶುಲ್ಕ ಹೆಚ್ಚಿಸಿರುವುದನ್ನು ಹಿಂಪಡೆಯಬೇಕು. ಅಷ್ಟೇ ಅಲ್ಲದೇ, ವಸ್ತ್ರಸಂಹಿತೆ, ಗ್ರಂಥಾಲಯದ ಓದಿನ ಸಮಯವನ್ನು ಕಡಿತಗೊಳಿಸಿರುವುದನ್ನೂ ಹಿಂಪಡೆಯಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.</p>.<p><span class="bold"><strong>ಶಿವಸೇನೆ ಖಂಡನೆ</strong></span></p>.<p><strong>ಮುಂಬೈ ವರದಿ:</strong> ಜೆಎನ್ಯು ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರ ‘ಅಮಾನವೀಯ’ ಲಾಠಿ ಪ್ರಹಾರವನ್ನು ಖಂಡಿಸಿ, ಮೋದಿ ನೇತೃತ್ವದ ಸರ್ಕಾರವನ್ನು ಶಿವಸೇನೆ ಗುರುವಾರ ತರಾಟೆಗೆ ತೆಗೆದುಕೊಂಡಿದೆ.</p>.<p>ಅಂಧ ವಿದ್ಯಾರ್ಥಿಗಳ ಮೇಲೂ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಯಾವ ಸರ್ಕಾರವೂ ಇಷ್ಟೊಂದು ಕ್ರೂರ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>