ಬಾಲಿವುಡ್ ಚಿತ್ರತಂಡವೊಂದು ‘ಉತ್ಕರ್ಷ’ ಎಂಬ ಸಿನಿಮಾ ಚಿತ್ರೀಕರಣಕ್ಕಾಗಿ ಬೆಂಗಳೂರಿನಿಂದ ಮಡಿಕೇರಿಗೆ ಹೋಗುತ್ತಿತ್ತು. ಈ ವೇಳೆ ಯಶೋದಾಪುರದ ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಡುಹಂದಿ ಅಡ್ಡಬಂದಿದ್ದು, ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ. ಆದರೆ, ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸತ್ತರ್ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಪೂವಯ್ಯ ತಿಳಿಸಿದ್ದಾರೆ.