ಗುಂಪು ಹಲ್ಲೆಗಳ ಸಂದರ್ಭದಲ್ಲಿ ‘ಜೈ ಶ್ರೀರಾಂ’ ಘೋಷಣೆ ಕೂಗಲಾಗುತ್ತಿದೆ. ಹಾಗಾಗಿ, ಈ ಘೋಷಣೆ ಈಗ ಒಂದು ಪ್ರಚೋದನಕಾರಿ ಯುದ್ಧಘೋಷವಾಗಿ ಮಾರ್ಪಟ್ಟಿದೆ ಎಂದು ಕಳವಳ ವ್ಯಕ್ತಪಡಿಸಿ 49 ಪ್ರಸಿದ್ಧ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅದಕ್ಕೆ ಅಡೂರ್ ಅವರೂ ಸಹಿ ಹಾಕಿದ್ದಾರೆ. ಈ ಕಾರಣಕ್ಕಾಗಿಯೇ ಅಡೂರ್ ಅವರನ್ನು ಬಿ.ಗೋಪಾಲಕೃಷ್ಣ ಟೀಕಿಸಿದ್ದಾರೆ.