ನಾಳೆ ಪ್ರಯಾಗ್ರಾಜ್ಗೆ ಭೇಟಿ ನೀಡಲಿರುವ ಅವರು ಪಕ್ಷದ ಮುಖಂಡರು ಮತ್ತು ಲೋಕಸಭೆ ಚುನಾವಣೆಯಲ್ಲಿ ಪೂರ್ವ ಉತ್ತರ ಪ್ರದೇಶದಕ್ಷೇತ್ರಗಳಿಂದ ಸ್ಪರ್ಧಿಸಿದ್ದ 40 ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ. ಯಾವ್ಯಾವ ಅಂಶಗಳು ಸೋಲಿಗೆ ಕಾರಣವಾದವು ಎಂಬುದನ್ನು ಅವಲೋಕಿಸಲಿದ್ದಾರೆ. ಅಭ್ಯರ್ಥಿಗಳು ಮಾತ್ರವಲ್ಲದೆ, 40 ಜಿಲ್ಲೆಗಳ ಕಾಂಗ್ರೆಸ್ ಘಟಕದ ಮುಖ್ಯಸ್ಥರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.