ಪುಲ್ವಾಮಾ ದಾಳಿಯನ್ನು ‘ದುರ್ಘಟನೆ (ಅಪಘಾತ ಎಂಬರ್ಥದಲ್ಲಿ)’ ಎಂಬ ಶಬ್ದ ಬಳಸಿ ಟ್ವೀಟ್ ಮಾಡಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಆಕ್ರೋಶಕ್ಕೆ ಗುರಿಯಾಗಿದ್ದರು. ಕೇಂದ್ರದ ಹಲವು ಸಚಿವರು ಮತ್ತು ಬಿಜೆಪಿ ಬೆಂಬಲಿಗರು ನೇರವಾಗಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇಮೌರ್ಯ ಅವರ ಹೇಳಿಕೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ದಿಗ್ವಿಜಯ್ ಸಿಂಗ್, ಕೇಂದ್ರ ಸಚಿವರಿಗೆ ಸವಾಲೆಸೆದಿದ್ದಾರೆ.