ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾದಲ್ಲಿ ನಡೆದದ್ದು ‘ದುರ್ಘಟನೆ’ ಎಂದ ಬಿಜೆಪಿ ನಾಯಕ

ದಿಗ್ವಿಜಯ್ ಆಯ್ತು, ಈಗ ಕೇಶವ ಪ್ರಸಾದ್ ಮೌರ್ಯ ಸರದಿ
Last Updated 6 ಮಾರ್ಚ್ 2019, 6:10 IST
ಅಕ್ಷರ ಗಾತ್ರ

ನವದೆಹಲಿ:‘ಪುಲ್ವಾಮಾದಲ್ಲಿ ನಡೆದದ್ದು ದುರ್ಘಟನೆ’ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ ಪ್ರಸಾದ್ ಮೌರ್ಯ ಹೇಳಿರುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪುಲ್ವಾಮಾ ದಾಳಿಯನ್ನು ‘ದುರ್ಘಟನೆ (ಅಪಘಾತ ಎಂಬರ್ಥದಲ್ಲಿ)’ ಎಂಬ ಶಬ್ದ ಬಳಸಿ ಟ್ವೀಟ್ ಮಾಡಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಆಕ್ರೋಶಕ್ಕೆ ಗುರಿಯಾಗಿದ್ದರು. ಕೇಂದ್ರದ ಹಲವು ಸಚಿವರು ಮತ್ತು ಬಿಜೆಪಿ ಬೆಂಬಲಿಗರು ನೇರವಾಗಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇಮೌರ್ಯ ಅವರ ಹೇಳಿಕೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ದಿಗ್ವಿಜಯ್ ಸಿಂಗ್, ಕೇಂದ್ರ ಸಚಿವರಿಗೆ ಸವಾಲೆಸೆದಿದ್ದಾರೆ.

‘ಪುಲ್ವಾಮಾ ದಾಳಿಯನ್ನು ‘ದುರ್ಘಟನೆ’ ಎಂದು ಕರೆದಾಗ ಮೂವರು ಕೇಂದ್ರ ಸಚಿವರು ನನ್ನನ್ನು ಪಾಕಿಸ್ತಾನದ ಬೆಂಬಲಿಗ ಎಂದು ಬಿಂಬಿಸಿದರು. ಈಗ ಕೇಶವ ಪ್ರಸಾದ್ ಮೌರ್ಯ ಅವರ ಈ ಹೇಳಿಕೆಯನ್ನು ಕೇಳಿ. ಮೋದಿ ಜೀ ಮತ್ತು ಅವರ ಸಂಪುಟ ಸಚಿವರಿಂದ ಏನಾದರೂ ಪ್ರತಿಕ್ರಿಯೆಗಳಿವೆಯೇ?’ ಎಂದು ದಿಗ್ವಿಜಯ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT