ಭಾನುವಾರ, ಮಾರ್ಚ್ 26, 2023
31 °C
ದಿಗ್ವಿಜಯ್ ಆಯ್ತು, ಈಗ ಕೇಶವ ಪ್ರಸಾದ್ ಮೌರ್ಯ ಸರದಿ

ಪುಲ್ವಾಮಾದಲ್ಲಿ ನಡೆದದ್ದು ‘ದುರ್ಘಟನೆ’ ಎಂದ ಬಿಜೆಪಿ ನಾಯಕ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಪುಲ್ವಾಮಾದಲ್ಲಿ ನಡೆದದ್ದು ದುರ್ಘಟನೆ’ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ ಪ್ರಸಾದ್ ಮೌರ್ಯ ಹೇಳಿರುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪುಲ್ವಾಮಾ ದಾಳಿಯನ್ನು ‘ದುರ್ಘಟನೆ (ಅಪಘಾತ ಎಂಬರ್ಥದಲ್ಲಿ)’ ಎಂಬ ಶಬ್ದ ಬಳಸಿ ಟ್ವೀಟ್ ಮಾಡಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮಂಗಳವಾರ ಆಕ್ರೋಶಕ್ಕೆ ಗುರಿಯಾಗಿದ್ದರು. ಕೇಂದ್ರದ ಹಲವು ಸಚಿವರು ಮತ್ತು ಬಿಜೆಪಿ ಬೆಂಬಲಿಗರು ನೇರವಾಗಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮೌರ್ಯ ಅವರ ಹೇಳಿಕೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ದಿಗ್ವಿಜಯ್ ಸಿಂಗ್, ಕೇಂದ್ರ ಸಚಿವರಿಗೆ ಸವಾಲೆಸೆದಿದ್ದಾರೆ.

ಇದನ್ನೂ ಓದಿ: ‘ಧೈರ್ಯವಿದ್ದರೆ ನನ್ನ ಮೇಲೆ ಕೇಸ್ ಹಾಕಿ’ ಮೋದಿಗೆ ದಿಗ್ವಿಜಯ ಸಿಂಗ್ ಸವಾಲು

‘ಪುಲ್ವಾಮಾ ದಾಳಿಯನ್ನು ‘ದುರ್ಘಟನೆ’ ಎಂದು ಕರೆದಾಗ ಮೂವರು ಕೇಂದ್ರ ಸಚಿವರು ನನ್ನನ್ನು ಪಾಕಿಸ್ತಾನದ ಬೆಂಬಲಿಗ ಎಂದು ಬಿಂಬಿಸಿದರು. ಈಗ ಕೇಶವ ಪ್ರಸಾದ್ ಮೌರ್ಯ ಅವರ ಈ ಹೇಳಿಕೆಯನ್ನು ಕೇಳಿ. ಮೋದಿ ಜೀ ಮತ್ತು ಅವರ ಸಂಪುಟ ಸಚಿವರಿಂದ ಏನಾದರೂ ಪ್ರತಿಕ್ರಿಯೆಗಳಿವೆಯೇ?’ ಎಂದು ದಿಗ್ವಿಜಯ್ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು