<p><strong>ಲಖನೌ:</strong> ಆಗ್ರಾ ಕೇಂದ್ರ ಕಾರಾಗೃಹದ 10 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಆಗ್ರಾ ಜಿಲ್ಲಾಧಿಕಾರಿ ಪಿ.ಎನ್. ಸಿಂಗ್ ತಿಳಿಸಿದ್ದಾರೆ.</p>.<p>12 ಕೈದಿಗಳ ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 10 ಕೈದಿಗಳಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು ಅವರನ್ನು ಜೈಲಿನ ಹಿಂಭಾಗದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಜೈಲಿನಲ್ಲಿರುವ ಎಲ್ಲಾ 1350 ಕೈದಿಗಳಿಗೆ ಹಾಗೂ 112 ಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.</p>.<p>ಮೇ 6ರಂದು 60 ವರ್ಷದ ಕೈದಿಯೊಬ್ಬರಿಗೆ ಕೋವಿಡ್–19 ದೃಢಪಟ್ಟಿತ್ತು. ಕಳೆದ ಶುಕ್ರವಾರ ಆ ಕೈದಿಯನ್ನು ತೀವ್ರ ಅನಾರೋಗ್ಯದ ಕಾರಣ ಎಸ್.ಎನ್. ಮೆಡಿಕಲ್ ಕಾಲೇಜಿಗೆ ದಾಖಲು ಮಾಡಲಾಗಿತ್ತು. ಆದರೆ ಮೆದುಳು ನಿಷ್ಕ್ರೀಯಗೊಂಡು ಆ ವ್ಯಕ್ತಿ ಮೃತಪಟ್ಟರು ಎಂದು ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಸೋಂಕು ದೃಢಪಟ್ಟಿರುವ ಎಲ್ಲಾ ಕೈದಿಗಳ ಆಪ್ತರು ಮತ್ತು ಅವರ ಸಂಪರ್ಕಕ್ಕೆ ಬಂದಿದ್ದಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಾರ್ಚ್ 15ರ ನಂತರ ಜೈಲಿಗೆ ಭೇಟಿ ನೀಡುವವರು ಹಾಗೂ ಕೈದಿಗಳ ಕುಟುಂಬದವರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಆದರೂ ಕೈದಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಸ್ಪಷ್ಟವಾಗಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜೈಲು ಅಧಿಕಾರಿ ವಿ.ಎನ್.ಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಆಗ್ರಾ ಕೇಂದ್ರ ಕಾರಾಗೃಹದ 10 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಆಗ್ರಾ ಜಿಲ್ಲಾಧಿಕಾರಿ ಪಿ.ಎನ್. ಸಿಂಗ್ ತಿಳಿಸಿದ್ದಾರೆ.</p>.<p>12 ಕೈದಿಗಳ ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 10 ಕೈದಿಗಳಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು ಅವರನ್ನು ಜೈಲಿನ ಹಿಂಭಾಗದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಜೈಲಿನಲ್ಲಿರುವ ಎಲ್ಲಾ 1350 ಕೈದಿಗಳಿಗೆ ಹಾಗೂ 112 ಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.</p>.<p>ಮೇ 6ರಂದು 60 ವರ್ಷದ ಕೈದಿಯೊಬ್ಬರಿಗೆ ಕೋವಿಡ್–19 ದೃಢಪಟ್ಟಿತ್ತು. ಕಳೆದ ಶುಕ್ರವಾರ ಆ ಕೈದಿಯನ್ನು ತೀವ್ರ ಅನಾರೋಗ್ಯದ ಕಾರಣ ಎಸ್.ಎನ್. ಮೆಡಿಕಲ್ ಕಾಲೇಜಿಗೆ ದಾಖಲು ಮಾಡಲಾಗಿತ್ತು. ಆದರೆ ಮೆದುಳು ನಿಷ್ಕ್ರೀಯಗೊಂಡು ಆ ವ್ಯಕ್ತಿ ಮೃತಪಟ್ಟರು ಎಂದು ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಸೋಂಕು ದೃಢಪಟ್ಟಿರುವ ಎಲ್ಲಾ ಕೈದಿಗಳ ಆಪ್ತರು ಮತ್ತು ಅವರ ಸಂಪರ್ಕಕ್ಕೆ ಬಂದಿದ್ದಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮಾರ್ಚ್ 15ರ ನಂತರ ಜೈಲಿಗೆ ಭೇಟಿ ನೀಡುವವರು ಹಾಗೂ ಕೈದಿಗಳ ಕುಟುಂಬದವರ ಭೇಟಿಯನ್ನು ನಿರ್ಬಂಧಿಸಲಾಗಿತ್ತು. ಆದರೂ ಕೈದಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಸ್ಪಷ್ಟವಾಗಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜೈಲು ಅಧಿಕಾರಿ ವಿ.ಎನ್.ಸಿಂಗ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>