ಕೋಲ್ಕತ್ತ: ‘ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಯೋಜಿಸಿರುವ ಜನವರಿ 19ರ ವಿರೋಧ ಪಕ್ಷಗಳ ರ್ಯಾಲಿ ಬಿಜೆಪಿ ಪಾಲಿಗೆ ಸಾವಿನ ಗಂಟೆ ಆಗಲಿದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯೂ ಆಗಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.
‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಬಿಜೆಪಿ 125ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಿಲ್ಲ. ಬಿಜೆಪಿಗಿಂತ ಪ್ರಾದೇಶಿಕ ಪಕ್ಷಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲಲಿವೆ’ ಎಂದು ಅವರು ತಿಳಿಸಿದ್ದಾರೆ.
ರ್ಯಾಲಿ ನಡೆಯುವ ಬ್ರಿಗೇಡ್ ಮೈದಾನಕ್ಕೆ ಬ್ಯಾನರ್ಜಿ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.