‘ಶನಿವಾರದ ಘಟನೆಯಲ್ಲಿ ಇಬ್ಬರು ಹಿರಿಯ ಅಧಿಕಾರಿಗಳು ಕೊರೊನಾ ವೈರಸ್ ಪರೀಕ್ಷಾ ವರದಿಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡಿರುವುದು ಕಂಡು ಬಂದಿದೆ. ಈ ಬಗ್ಗೆ ಈಗಾಗಲೇ ವಾಯುಯಾನ ನಿಯಂತ್ರಕ ಡಿಜಿಸಿಎ ಪ್ರಾಥಮಿಕ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ’ ಎಂದೂ ಸಂಧು ಮಾಹಿತಿ ನೀಡಿದ್ದಾರೆ.