‘ಸರ್ಕಾರಗಳ ಬಳಿ ಹಣವಿಲ್ಲದಾದಾಗ ಅವರು ಈ ರೀತಿ ಮಾಡುತ್ತಾರೆ. ಕೇಂದ್ರ ಸರ್ಕಾರದ ಬಳಿ ಹಣವಿಲ್ಲ, ಆರ್ಥಿಕ ಬೆಳವಣಿಗೆ ಶೇ 5ಕ್ಕಿಂತಲೂ ಕಡಿಮೆ ಇದೆ. ನರೇಗಾ ಯೋಜನೆಗೆ ನೀಡಬೇಕಿರುವ ಲಕ್ಷಾಂತರ ರೂಪಾಯಿ ಬಾಕಿ ಇವೆ. ಹೀಗಾಗಿ ಸರ್ಕಾರದ ಬಳಿ ಇರುವ ಅಮೂಲ್ಯ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ’ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಟೀಕಿಸಿದ್ದಾರೆ.