ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಧರ್ಮಾಂಧತೆ, ದ್ವೇಷದ ಗಾಳಿ ಆವರಿಸಿದೆ: ಪಶ್ಚಿಮ ಬಂಗಾಳ ರಾಜ್ಯಪಾಲ

Last Updated 8 ಫೆಬ್ರುವರಿ 2020, 10:42 IST
ಅಕ್ಷರ ಗಾತ್ರ

ಕೋಲ್ಕತ್ತ: ಬಜೆಟ್‌ ಅಧಿವೇಶನದ ಆರಂಭಕ್ಕೂ ಮುನ್ನಸರ್ಕಾರ ಸಿದ್ಧಪಡಿಸಿದಭಾಷಣವನ್ನೇ ಪಶ್ಚಿಮ ಬಂಗಾಳ ರಾಜ್ಯಪಾಲ ಜಗ್‌ದೀಪ್‌ ಧನ್‌ಕರ್‌ ಬಜೆಟ್‌ ಅಧಿವೇಶನದಲ್ಲಿ ಯಥಾವತ್ತಾಗಿ ಓದಿದ್ದಾರೆ. ಭಾಷಣದ ಅಂಶಗಳಲ್ಲಿ ಯಾವುದೇ ಬದಲಾವಣೆಗಳನ್ನು ರಾಜ್ಯಪಾಲರು ಮಾಡಿಲ್ಲ.

ಎನ್‌ಆರ್‌ಸಿ ವಿರೋಧಿಸಿ ನಡೆದ ಪ್ರತಿಭಟನೆಗಳಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ರಾಜ್ಯಪಾಲರು, ಸಂವಿಧಾನದ ಮೂಲ ಆಶಯಗಳನ್ನು ಉಳಿಸಿಕೊಳ್ಳುವ ಸವಾಲು ಎದುರಾಗಿದೆ. ಪ್ರಜಾಪ್ರಭುತ್ವದ ಉಳಿವು ಅಂಕಿಗಳ ಮೇಲಿಲ್ಲ. ಎಲ್ಲ ನಾಗರಿಕರ ಭದ್ರತೆ ಮತ್ತು ಭಾವನೆಗಳ ರಕ್ಷಣೆಯ ಮೇಲಿದೆ ಎಂದು ಹೇಳಿದ್ದಾರೆ.

ರಾಷ್ಟ್ರವಾದದ ಹೆಸರಿನಲ್ಲಿ ಹರಡಲಾಗುತ್ತಿರುವ ತಪ್ಪುಮಾಹಿತಿಗಳನ್ನು ನಿರಾಕರಿಸಬೇಕು. ದೇಶದಲ್ಲಿ ಅಸಹಿಷ್ಣುತೆ, ಧರ್ಮಾಂಧತೆ, ದ್ವೇಷದ ಗಾಳಿಯು ಆವರಿಸಿದೆ. ಬಡತನ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ತೊಡೆದುಹಾಕಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಎನ್‌ಪಿಆರ್‌, ಎನ್‌ಆರ್‌ಸಿ ಹೆಸರಿನಲ್ಲಿ ಜನರಲ್ಲಿ ಒಡಕು ಉಂಟುಮಾಡುವ ಪ್ರಯತ್ನಗಳನ್ನು ರಾಜ್ಯ ಸರ್ಕಾರ ವಿರೋಧಿಸುತ್ತದೆ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT