ನವದೆಹಲಿ: ಏರ್ಸೆಲ್–ಮ್ಯಾಕ್ಸಿಸ್ ಪ್ರಕರಣ ಸಂಬಂಧ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಅವರನ್ನು ಬಂಧಿಸದಂತೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನುಫೆ.18ರವರೆಗೆ ವಿಸ್ತರಿಸಲಾಗಿದೆ.
ಈ ಸಂಬಂಧಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಅವರು ಸೋಮವಾರ ಆದೇಶ ನೀಡಿದ್ದಾರೆ. ಇದಕ್ಕೂಮೊದಲು ಪ್ರಕರಣದ ವಿಚಾರಣೆಯನ್ನು ಫೆ.1ಕ್ಕೆ ನಿಗದಿಪಡಿಸಲಾಗಿತ್ತು.