ಇಬ್ಬರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ವಾದ ಮಂಡಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಸಿಬಿಐ ಪರ ವಕೀಲ ಸೋನಿಯಾ ಮಾಥೂರ್, ಇ.ಡಿ ಪರ ವಕೀಲರಾದ ನಿತೇಶ್ ರಾಣಾ ಅವರು ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಎದುರು ವಾದ ಮಂಡಿಸಿದರು. ಜಾಮೀನು ಅರ್ಜಿ ಸಲ್ಲಿಸಿ, ಸಾಕಷ್ಟು ಕಾಲಾವಕಾಶ ಮುಗಿದಿದೆ. ಈಗ ಮತ್ತೆ, ಮುಂದೂಡುತ್ತಿರುವುದು ಸರಿಯಲ್ಲ ಎಂದುಚಿದಂಬರಂ ಮತ್ತು ಕಾರ್ತಿ ಪರ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘ್ವಿ ಅವರು ಆಕ್ಷೇಪ ವ್ಯಕ್ತಪಡಿಸಿದರು.