ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರದಲ್ಲಿ ಬಿಜೆಪಿಯ ದೇವೇಂದ್ರ ಫಡಣವೀಸ್ ಮುಖ್ಯಮಂತ್ರಿಯಾಗಿದ್ದರೆ, ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ. ಸರ್ಕಾರ ನಾಳೆ (ಬುಧವಾರ ) ಸಂಜೆ 5 ಗಂಟೆಯ ಒಳಗಾಗಿ ಬಹುಮತ ಸಾಬೀತು ಮಾಡಬೇಕಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿತ್ತು.
ಮುಂಜಾನೆ ಅಜಿತ್ ಪವಾರ್ ಅವರನ್ನು ಸುಪ್ರಿಯಾ ಸುಳೆ ಅವರ ಪತಿ ಸದಾನಂದ ಸುಳೆ ಭೇಟಿಯಾಗಿದ್ದರು. ನಂತರ ಹಿರಿಯ ನಾಯಕರಾದ ಪ್ರಫುಲ್ ಪಟೇಲ್, ಛಗಲ್ ಭುಜಬಲ್, ಜಯಂತ್ ಪಾಟೀಲ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅಜಿತ್ ಅವರೊಂದಿಗೆ ಮಾತುಕತೆ ನಡೆಸಿದ್ದರು.