ಲಖನೌ: ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರಿಗಾಗಿ ಪ್ರತ್ಯೇಕ ಆಯೋಗ ರಚಿಸುವ ಅಗತ್ಯವಿದೆಯೇ ಎಂದು ಮಂಗಳವಾರ ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.
‘ಉದ್ಯೋಗ ವಿನಿಮಯ ಈಗಾಗಲೇ ಅಸ್ತಿತ್ವದಲ್ಲಿದ್ದು ಆಯೋಗ ರಚನೆಯು, ಸರ್ಕಾರದ ವೈಫಲ್ಯಗಳು, ಜನ್–ಧನ್ (ಮಾನವ ಶಕ್ತಿ ಮತ್ತು ಹಣ) ದುರುಪಯೋಗಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಮಾರ್ಗವಾಗಿದೆ’ ಎಂದು ಅವರು ಟ್ವೀಟ್ನಲ್ಲಿ ಆರೋಪಿಸಿದ್ದಾರೆ.
ವಲಸೆ ಕಾರ್ಮಿಕರಿಗಾಗಿಯೇ ಪ್ರತ್ಯೇಕ ಆಯೋಗ ರಚಿಸುವುದಾಗಿ ಉತ್ತರ ಪ್ರದೇಶ ಸರ್ಕಾರ ತಿಳಿಸಿತ್ತು. ಈ ನಿರ್ಧಾರಕ್ಕೆ ಅಖಿಲೇಶ್ ಯಾದವ್ ಟ್ವಿಟ್ಟರ್ನಲ್ಲಿ ಹಿಂದಿಯಲ್ಲಿಪ್ರತಿಕ್ರಿಯಿಸಿದ್ದಾರೆ.