<p><strong>ಲಖನೌ: </strong>ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಒಕ್ಕೂಟರಂಗ ರಚಿಸುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಜತೆ ಕೈಜೋಡಿಸುವ ಸುಳಿವು ನೀಡಿದ್ದಾರೆ.</p>.<p>ಮಧ್ಯ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಏಕೈಕ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದ ಕಾಂಗ್ರೆಸ್ ವರ್ತನೆಯಿಂದ ಮುನಿಸಿಕೊಂಡಿರುವ ಅಖಿಲೇಶ್ ಯಾದವ್ ಈ ನಿರ್ಧಾರ ತೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮಧ್ಯ ಪ್ರದೇಶದಲ್ಲಿ ಸರ್ಕಾರ ರಚನೆಗೆ ಸರಳ ಬಹುಮತದ ಕೊರತೆ ಎದುರಿಸುತ್ತಿದ್ದ ಕಾಂಗ್ರೆಸ್ಗೆ ಸಮಾಜವಾದಿ ಪಕ್ಷ ಬೆಷರತ್ ಬೆಂಬಲ ನೀಡಿತ್ತು. ಇಲ್ಲಿ ಸಮಾಜವಾದಿ ಪಕ್ಷದ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.</p>.<p>ಕಾಂಗ್ರೆಸ್ ಮತ್ತು ಬಿಜೆಪಿ ಹೊರಗಿಟ್ಟು ರಾಷ್ಟ್ರೀಯ ಮಟ್ಟದಲ್ಲಿ ಒಕ್ಕೂಟರಂಗ ರಚಿಸುವ ಪ್ರಯತ್ನದಲ್ಲಿ ತೊಡಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಜತೆ ಮೈತ್ರಿ ಮಾತುಕತೆ ನಡೆಸಲು ಜನವರಿ 6ರ ನಂತರ ಹೈದರಾಬಾದ್ಗೆ ತೆರಳುವುದಾಗಿ ಅಖಿಲೇಶ್ ತಿಳಿಸಿದ್ದಾರೆ.</p>.<p>ಮಾಯಾವತಿ ಮತ್ತು ಅಖಿಲೇಶ್ ಯಾದವ್ ಅವರನ್ನು ಕೆಸಿಆರ್ ಬುಧವಾರ ಭೇಟಿಯಾಗುವ ಕಾರ್ಯಕ್ರಮವಿತ್ತು. ಆದರೆ, ಅದು ರದ್ದಾಗಿದೆ.</p>.<p>ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕದಳವು (ಆರ್ಎಲ್ಡಿ) ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ನೇತೃತ್ವದ ಮೈತ್ರಿಕೂಟ ಸೇರುವ ಸುಳಿವು ನೀಡಿದ್ದಾರೆ.</p>.<p>ಈಗಾಗಲೇ ಸ್ಥಾನ ಹೊಂದಾಣಿಕೆ ಅಂತಿಮಗೊಂಡಿದ್ದು ಎಸ್ಪಿ 37 ಮತ್ತು ಬಿಎಸ್ಪಿ 38 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಮೂರು ಕ್ಷೇತ್ರಗಳನ್ನು ಆರ್ಎಲ್ಡಿಗೆ ಬಿಟ್ಟು ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.</p>.<p><strong>ಕಾಂಗ್ರೆಸ್ನತ್ತ ಶಿವಪಾಲ್ ಸಿಂಗ್</strong></p>.<p>ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜತೆ ಕೈಜೋಡಿಸಲು ಸಿದ್ಧ ಎಂದು ಪ್ರಗತಿಶೀಲ ಸಮಾಜವಾದಿ ಪಕ್ಷದ (ಲೋಹಿಯಾ) ಮುಖಂಡ ಶಿವಪಾಲ್ ಸಿಂಗ್ ಯಾದವ್ ಬುಧವಾರ ಪ್ರಕಟಿಸಿದ್ದಾರೆ.</p>.<p>ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಸಹೋದರರಾದ ಶಿವಪಾಲ್ ಸಿಂಗ್ ಅವರು ಪ್ರಗತಿಶೀಲ ಸಮಾಜವಾದಿ ಪಕ್ಷ (ಲೋಹಿಯಾ) ಹುಟ್ಟು ಹಾಕಿದ್ದಾರೆ.<br /><br /><strong>ಪ್ರಧಾನಿ ಭೇಟಿಯಾದ ಕೆಸಿಆರ್</strong></p>.<p>ಟಿಆರ್ಎಸ್ ಮುಖಂಡ ಕೆ. ಚಂದ್ರಶೇಖರ್ ರಾವ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.</p>.<p>ಪ್ರಧಾನಿ ಜತೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಸಿದ ಮಾತುಕತೆ ವೇಳೆ ತೆಲಂಗಾಣ ಅಭಿವೃದ್ಧಿ ಯೋಜನೆ ಮತ್ತು ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಾಯಿತು ಎಂದು ಕೆಸಿಆರ್ ಹೇಳಿದ್ದಾರೆ.</p>.<p>**<br /><strong>ಮುಖ್ಯಾಂಶಗಳು</strong><br />ಕಾಂಗ್ರೆಸ್ ಜತೆ ಮುನಿಸಿಕೊಂಡ ಅಖಿಲೇಶ್ ಯಾದವ್</p>.<p>ಮಧ್ಯಪ್ರದೇಶ ಸಂಪುಟದಲ್ಲಿ ಎಸ್.ಪಿ ಶಾಸಕನಿಗೆ ಸಿಗದ ಸಚಿವ ಸ್ಥಾನ</p>.<p>ಎಸ್.ಪಿ ಬಿಎಸ್ಪಿ ಮೈತ್ರಿಕೂಟಕ್ಕೆ ಅಜಿತ್ಸಿಂಗ್</p>.<p>**</p>.<p>2019ರಲ್ಲಿ ಬಿಜೆಪಿಯನ್ನು ಎದುರಿಸಲು ಒಂದಿಲ್ಲ ಒಂದು ಮಹಾ ಮೈತ್ರಿಕೂಟ ನಿಶ್ಚಿತವಾಗಿ ಅಸ್ತಿತ್ವಕ್ಕೆ ಬರಲಿದೆ<br /><em><strong>– ಅಖಿಲೇಶ್ ಯಾದವ್, ಎಸ್ಪಿ ಮುಖಂಡ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಒಕ್ಕೂಟರಂಗ ರಚಿಸುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (ಕೆಸಿಆರ್) ಜತೆ ಕೈಜೋಡಿಸುವ ಸುಳಿವು ನೀಡಿದ್ದಾರೆ.</p>.<p>ಮಧ್ಯ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಏಕೈಕ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದ ಕಾಂಗ್ರೆಸ್ ವರ್ತನೆಯಿಂದ ಮುನಿಸಿಕೊಂಡಿರುವ ಅಖಿಲೇಶ್ ಯಾದವ್ ಈ ನಿರ್ಧಾರ ತೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಮಧ್ಯ ಪ್ರದೇಶದಲ್ಲಿ ಸರ್ಕಾರ ರಚನೆಗೆ ಸರಳ ಬಹುಮತದ ಕೊರತೆ ಎದುರಿಸುತ್ತಿದ್ದ ಕಾಂಗ್ರೆಸ್ಗೆ ಸಮಾಜವಾದಿ ಪಕ್ಷ ಬೆಷರತ್ ಬೆಂಬಲ ನೀಡಿತ್ತು. ಇಲ್ಲಿ ಸಮಾಜವಾದಿ ಪಕ್ಷದ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.</p>.<p>ಕಾಂಗ್ರೆಸ್ ಮತ್ತು ಬಿಜೆಪಿ ಹೊರಗಿಟ್ಟು ರಾಷ್ಟ್ರೀಯ ಮಟ್ಟದಲ್ಲಿ ಒಕ್ಕೂಟರಂಗ ರಚಿಸುವ ಪ್ರಯತ್ನದಲ್ಲಿ ತೊಡಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಜತೆ ಮೈತ್ರಿ ಮಾತುಕತೆ ನಡೆಸಲು ಜನವರಿ 6ರ ನಂತರ ಹೈದರಾಬಾದ್ಗೆ ತೆರಳುವುದಾಗಿ ಅಖಿಲೇಶ್ ತಿಳಿಸಿದ್ದಾರೆ.</p>.<p>ಮಾಯಾವತಿ ಮತ್ತು ಅಖಿಲೇಶ್ ಯಾದವ್ ಅವರನ್ನು ಕೆಸಿಆರ್ ಬುಧವಾರ ಭೇಟಿಯಾಗುವ ಕಾರ್ಯಕ್ರಮವಿತ್ತು. ಆದರೆ, ಅದು ರದ್ದಾಗಿದೆ.</p>.<p>ಅಜಿತ್ ಸಿಂಗ್ ನೇತೃತ್ವದ ರಾಷ್ಟ್ರೀಯ ಲೋಕದಳವು (ಆರ್ಎಲ್ಡಿ) ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ನೇತೃತ್ವದ ಮೈತ್ರಿಕೂಟ ಸೇರುವ ಸುಳಿವು ನೀಡಿದ್ದಾರೆ.</p>.<p>ಈಗಾಗಲೇ ಸ್ಥಾನ ಹೊಂದಾಣಿಕೆ ಅಂತಿಮಗೊಂಡಿದ್ದು ಎಸ್ಪಿ 37 ಮತ್ತು ಬಿಎಸ್ಪಿ 38 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಮೂರು ಕ್ಷೇತ್ರಗಳನ್ನು ಆರ್ಎಲ್ಡಿಗೆ ಬಿಟ್ಟು ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.</p>.<p><strong>ಕಾಂಗ್ರೆಸ್ನತ್ತ ಶಿವಪಾಲ್ ಸಿಂಗ್</strong></p>.<p>ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜತೆ ಕೈಜೋಡಿಸಲು ಸಿದ್ಧ ಎಂದು ಪ್ರಗತಿಶೀಲ ಸಮಾಜವಾದಿ ಪಕ್ಷದ (ಲೋಹಿಯಾ) ಮುಖಂಡ ಶಿವಪಾಲ್ ಸಿಂಗ್ ಯಾದವ್ ಬುಧವಾರ ಪ್ರಕಟಿಸಿದ್ದಾರೆ.</p>.<p>ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಸಹೋದರರಾದ ಶಿವಪಾಲ್ ಸಿಂಗ್ ಅವರು ಪ್ರಗತಿಶೀಲ ಸಮಾಜವಾದಿ ಪಕ್ಷ (ಲೋಹಿಯಾ) ಹುಟ್ಟು ಹಾಕಿದ್ದಾರೆ.<br /><br /><strong>ಪ್ರಧಾನಿ ಭೇಟಿಯಾದ ಕೆಸಿಆರ್</strong></p>.<p>ಟಿಆರ್ಎಸ್ ಮುಖಂಡ ಕೆ. ಚಂದ್ರಶೇಖರ್ ರಾವ್ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.</p>.<p>ಪ್ರಧಾನಿ ಜತೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಸಿದ ಮಾತುಕತೆ ವೇಳೆ ತೆಲಂಗಾಣ ಅಭಿವೃದ್ಧಿ ಯೋಜನೆ ಮತ್ತು ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಾಯಿತು ಎಂದು ಕೆಸಿಆರ್ ಹೇಳಿದ್ದಾರೆ.</p>.<p>**<br /><strong>ಮುಖ್ಯಾಂಶಗಳು</strong><br />ಕಾಂಗ್ರೆಸ್ ಜತೆ ಮುನಿಸಿಕೊಂಡ ಅಖಿಲೇಶ್ ಯಾದವ್</p>.<p>ಮಧ್ಯಪ್ರದೇಶ ಸಂಪುಟದಲ್ಲಿ ಎಸ್.ಪಿ ಶಾಸಕನಿಗೆ ಸಿಗದ ಸಚಿವ ಸ್ಥಾನ</p>.<p>ಎಸ್.ಪಿ ಬಿಎಸ್ಪಿ ಮೈತ್ರಿಕೂಟಕ್ಕೆ ಅಜಿತ್ಸಿಂಗ್</p>.<p>**</p>.<p>2019ರಲ್ಲಿ ಬಿಜೆಪಿಯನ್ನು ಎದುರಿಸಲು ಒಂದಿಲ್ಲ ಒಂದು ಮಹಾ ಮೈತ್ರಿಕೂಟ ನಿಶ್ಚಿತವಾಗಿ ಅಸ್ತಿತ್ವಕ್ಕೆ ಬರಲಿದೆ<br /><em><strong>– ಅಖಿಲೇಶ್ ಯಾದವ್, ಎಸ್ಪಿ ಮುಖಂಡ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>