ಮುಂಬೈ: ಶುಕ್ರವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಮುಂಬೈ ನಗರಿ ತತ್ತರಿಸಿದೆ. ಮುಂಬೈನಿಂದ ಕೊಲ್ಲಾಪುರಕ್ಕೆ ಹೊರಟಿದ್ದ ಮಹಾಲಕ್ಷ್ಮೀ ಎಕ್ಸ್ಪ್ರೆಸ್ ರೈಲು, ಶುಕ್ರವಾರ ರಾತ್ರಿಯಿಂದ ಠಾಣೆಯ ಬದಲಾಪುರದ ಬಳಿ ಪ್ರವಾಹದ ನೀರಿನಲ್ಲಿ ಸಿಲುಕಿತ್ತು. ರೈಲಿನಲ್ಲಿದ್ದ 1,050 ಪ್ರಯಾಣಿಕರನ್ನು ಶನಿವಾರ ಮಧ್ಯಾಹ್ನದ ವೇಳೆಗೆ ರಕ್ಷಿಸಲಾಯಿತು.