ನವದೆಹಲಿ: ‘ಕೋವಿಡ್ ಪಿಡುಗಿನ ವಿರುದ್ಧ ಹೋರಾಡಲು ಬಿಜೆಪಿಯ ಎಲ್ಲ ಸಂಸದರೂ ತಮ್ಮ ವಾರ್ಷಿಕ ಅಭಿವೃದ್ಧಿ ನಿಧಿಯಿಂದ ತಲಾ ₹ 1 ಕೋಟಿಯನ್ನು ಕೇಂದ್ರ ಸರ್ಕಾರದ ಪರಿಹಾರ ನಿಧಿಗೆ ದೇಣಿಗೆ ನೀಡಲಿದ್ದಾರೆ’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.
ಶನಿವಾರ ಈ ಕುರಿತು ಟ್ವೀಟ್ ಮಾಡಿರುವ ನಡ್ಡಾ, ‘ಇದರ ಜತೆಗೆ ಪಕ್ಷದ ಎಲ್ಲಾ ಶಾಸಕರು ಹಾಗೂ ಸಂಸದರು ತಮ್ಮ ಒಂದು ತಿಂಗಳ ವೇತನವನ್ನು ಕೇಂದ್ರದ ಪರಿಹಾರ ನಿಧಿಗೆ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ.