ಅಮರಾವತಿ: ಮಾಜಿ ಸಚಿವ, ಟಿಡಿಪಿ ಮುಖಂಡ ಕೆ.ಅಚ್ಚನ್ನಾಯ್ಡು ಸೇರಿದಂತೆ ಪಕ್ಷದ ಮುಖಂಡರನ್ನು ಬಂಧಿಸಿರುವ ಸರ್ಕಾರದ ಕ್ರಮಖಂಡಿಸಿ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಶಾಸಕರುಪ್ರತಿಭಟನೆ ನಡೆಸಿದರು.
ಮಂಗಳವಾರವಿಧಾನಸಭೆಗೆ ತೆರಳುವ ಮುನ್ನ ಟಿಡಿಪಿ ಪಕ್ಷದ ಸಂಸ್ಥಾಪಕ ಎನ್.ಟಿ.ರಾಮರಾವ್ ಪುತ್ಥಳಿಗೆ ಗೌರವ ಸಲ್ಲಿಸಿದರು. ಬಳಿಕ ಪಕ್ಷದ ಮೂಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ಇಎಸ್ಐ ವೈದ್ಯಕೀಯ ಪರಿಕರಗಳ ಖರೀದಿ ಕುರಿತ₹ 150 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಟಿಡಿಪಿ ಮುಖಂಡ ಕೆ.ಅಚ್ಚನ್ನಾಯ್ಡು ಮತ್ತು ಇತರ ಐವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂನ್ 12 ರಂದು (ಶುಕ್ರವಾರ) ಬಂಧಿಸಿದ್ದರು.
Amaravati: TDP MLAs&MLCs lead by former CM&party leader N Chandrababu Naidu pay tributes to party founder NT Rama Rao before going to Assembly.TDP leaders wore black shirts in protest against govt for arrests of party leaders,incl K Atchennaidu,deputy floor leader in the Assembly pic.twitter.com/2PnNWIqMXv