‘ಶಬರಿಮಲೆ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಕೆಲವು ಗೊಂದಲಗಳಿವೆ. ಸರ್ಕಾರವು ಕಾನೂನು ತಜ್ಞರ ಜೊತೆ ಈ ಬಗ್ಗೆ ಸಮಾಲೋಚನೆ ನಡೆಸಲಿದೆ. ದೇವಸ್ಥಾನದೊಳಗೆ ಪ್ರವೇಶಿಸಲೇಬೇಕು ಎನ್ನುವ ಮಹಿಳೆಯರು ನ್ಯಾಯಾಲಯದಿಂದ ಆದೇಶ ಪಡೆದುಕೊಳ್ಳಬೇಕು’ ಎಂದು ಕೇರಳದ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ಹೇಳಿದ್ದಾರೆ.