‘ಅಮಿತ್ ನೇತೃತ್ವದ ಕೇಂದ್ರ ಗೃಹ ಇಲಾಖೆಯು ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಬಲ್ಲದು, ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಬಹುದು ಎಂದಾದರೆ ಬೆಳಗಾವಿ ಗಡಿ ವಿವಾದ ಬಗೆಹರಿಸುವುದು ಅಷ್ಟು ಕಷ್ಟವಾಗಲಾರದು. ಈ ವಿಚಾರದತ್ತ ಅಮಿತ್ ಶಾ ಗಮನ ಹರಿಸಬೇಕಷ್ಟೇ’ ಎಂದು ಅವರು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.