<p><strong>ಮುಂಬೈ: </strong>ಕೇಂದ್ರ ಸರ್ಕಾರವು ಮನಸ್ಸು ಮಾಡಿದರೆ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಆಗಾಗ ಉದ್ವಿಗ್ನತೆಯ ಕಿಡಿ ಹೊತ್ತಿಸುವ ಬೆಳಗಾವಿ ವಿವಾದವನ್ನು ಸುಲಭವಾಗಿ ಪರಿಹರಿಸಬಹುದು ಎಂದು ಶಿವಸೇನೆಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅಭಿಪ್ರಾಯಪಟ್ಟರು.</p>.<p>‘ಅಮಿತ್ ನೇತೃತ್ವದ ಕೇಂದ್ರ ಗೃಹ ಇಲಾಖೆಯು ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಬಲ್ಲದು, ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಬಹುದು ಎಂದಾದರೆ ಬೆಳಗಾವಿ ಗಡಿ ವಿವಾದ ಬಗೆಹರಿಸುವುದು ಅಷ್ಟು ಕಷ್ಟವಾಗಲಾರದು. ಈ ವಿಚಾರದತ್ತ ಅಮಿತ್ ಶಾ ಗಮನ ಹರಿಸಬೇಕಷ್ಟೇ’ ಎಂದು ಅವರು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.</p>.<p>ಈ ಹಿಂದಿನ ಮುಂಬೈ ಪ್ರಾಂತ್ಯದಲ್ಲಿದ್ದ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮಹಾರಾಷ್ಟ್ರ ಹೇಳುತ್ತಿದೆ. ಇದೇ ಕಾರಣಕ್ಕೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅದರ ಒತ್ತಾಯ.</p>.<p>‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಕೇವಲ ತುಂಡು ಭೂಮಿಗಾಗಿ ಮಾರ್ತವೇ ಅಲ್ಲ. ಇದರಲ್ಲಿ ಮರಾಠಿ ಸಂಸ್ಕೃತಿ ಮತ್ತು ಭಾಷೆಯನ್ನು ರಕ್ಷಿಸುವ ಹೋರಾಟವೂ ಅಡಗಿದೆ’ ಎಂದು ಹೇಳಿದರು.</p>.<p>‘ಲಕ್ಷಾಂತರ ಮರಾಠಿ ಭಾಷಿಕರು ಬೆಳಗಾವಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಭಿನ್ನಮತ ಬದಿಗಿಟ್ಟು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಪರಸ್ಪರ ಚರ್ಚಿಸುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು’ಎಂದು ವಿನಂತಿಸಿದರು.</p>.<p>ಮಹಾರಾಷ್ಟ್ರ ಸರ್ಕಾರವು ಮಾರ್ಚ್ 2006ರಲ್ಲಿ ಬೆಳಗಾವಿಯ ಮೇಲೆ ಹಕ್ಕು ಸಾಧಿಸಲು ಸುಪ್ರೀಂ ಕೋರ್ಟ್ ಮೊರೆ ಹೋಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ತೀರ್ಪು ಹೊರಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಕೇಂದ್ರ ಸರ್ಕಾರವು ಮನಸ್ಸು ಮಾಡಿದರೆ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಆಗಾಗ ಉದ್ವಿಗ್ನತೆಯ ಕಿಡಿ ಹೊತ್ತಿಸುವ ಬೆಳಗಾವಿ ವಿವಾದವನ್ನು ಸುಲಭವಾಗಿ ಪರಿಹರಿಸಬಹುದು ಎಂದು ಶಿವಸೇನೆಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅಭಿಪ್ರಾಯಪಟ್ಟರು.</p>.<p>‘ಅಮಿತ್ ನೇತೃತ್ವದ ಕೇಂದ್ರ ಗೃಹ ಇಲಾಖೆಯು ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಬಲ್ಲದು, ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಬಹುದು ಎಂದಾದರೆ ಬೆಳಗಾವಿ ಗಡಿ ವಿವಾದ ಬಗೆಹರಿಸುವುದು ಅಷ್ಟು ಕಷ್ಟವಾಗಲಾರದು. ಈ ವಿಚಾರದತ್ತ ಅಮಿತ್ ಶಾ ಗಮನ ಹರಿಸಬೇಕಷ್ಟೇ’ ಎಂದು ಅವರು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.</p>.<p>ಈ ಹಿಂದಿನ ಮುಂಬೈ ಪ್ರಾಂತ್ಯದಲ್ಲಿದ್ದ ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮಹಾರಾಷ್ಟ್ರ ಹೇಳುತ್ತಿದೆ. ಇದೇ ಕಾರಣಕ್ಕೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅದರ ಒತ್ತಾಯ.</p>.<p>‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಕೇವಲ ತುಂಡು ಭೂಮಿಗಾಗಿ ಮಾರ್ತವೇ ಅಲ್ಲ. ಇದರಲ್ಲಿ ಮರಾಠಿ ಸಂಸ್ಕೃತಿ ಮತ್ತು ಭಾಷೆಯನ್ನು ರಕ್ಷಿಸುವ ಹೋರಾಟವೂ ಅಡಗಿದೆ’ ಎಂದು ಹೇಳಿದರು.</p>.<p>‘ಲಕ್ಷಾಂತರ ಮರಾಠಿ ಭಾಷಿಕರು ಬೆಳಗಾವಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಭಿನ್ನಮತ ಬದಿಗಿಟ್ಟು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಪರಸ್ಪರ ಚರ್ಚಿಸುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು’ಎಂದು ವಿನಂತಿಸಿದರು.</p>.<p>ಮಹಾರಾಷ್ಟ್ರ ಸರ್ಕಾರವು ಮಾರ್ಚ್ 2006ರಲ್ಲಿ ಬೆಳಗಾವಿಯ ಮೇಲೆ ಹಕ್ಕು ಸಾಧಿಸಲು ಸುಪ್ರೀಂ ಕೋರ್ಟ್ ಮೊರೆ ಹೋಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ತೀರ್ಪು ಹೊರಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>