ಕೊಲ್ಕತ್ತಾ:ಪಶ್ಚಿಮ ಬಂಗಾಳದಲ್ಲಿ ಇದೀಗ ವಿಧಾನಸಭೆ ಚುನಾವಣೆಯ ಕಾವು ನಿಧಾನವಾಗಿ ರಂಗೇರುತ್ತಿದೆ. ಮುಂದಿನ ವರ್ಷವೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ವಿವಿಧ ಪಕ್ಷಗಳು ರಣತಂತ್ರ ಹೆಣೆಯುತ್ತಿವೆ. ಪಶ್ಚಿಮ ಬಂಗಾಳದ ಬಗ್ಗೆ ಭರವಸೆ ಇರಿಸಿಕೊಂಡಿರುವ ಬಿಜೆಪಿಯನ್ನು ಎದುರಿಸಲು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ (ಟಿಎಂಸಿ) ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಅವರ ಮೊರೆ ಹೋಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.