<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಹರಡುವಿಕೆ ಪರಿಶೀಲನೆಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ದೆಹಲಿಯಲ್ಲಿ ಕೊರೊನಾ ಹರಡುವಿಕೆಗೆ ಸಂಬಂಧಿಸಿ ಸರ್ವಪಕ್ಷಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಸಾಂಕ್ರಾಮಿಕದ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ನಾವೆಲ್ಲ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಅಡಿ ಒಗ್ಗಟ್ಟಾಗಿದ್ದೇವೆ’ ಎಂದು ಹೇಳಿದ್ದಾರೆ.</p>.<p>ಮನೆ–ಮನೆ ಸಮೀಕ್ಷೆ, ತೀರಾ ತಳ ಮಟ್ಟದಿಂದ ಸೋಂಕು ಪತ್ತೆ ಪರೀಕ್ಷೆ ಸೇರಿದಂತೆ ಸಭೆಯಲ್ಲಿ ಕೈಗೊಳ್ಳಲಾದ ಎಲ್ಲ ನಿರ್ಧಾರಗಳನ್ನು ಸೂಕ್ತವಾಗಿ ಜಾರಿಗೆ ತರುವಂತೆ ಕೇಂದ್ರ, ದೆಹಲಿ ಸರ್ಕಾರ ಮತ್ತು ದೆಹಲಿಯ ಮೂರು ಪುರಸಭೆ ಆಡಳಿತಗಳಿಗೆ ಶಾ ನಿರ್ದೇಶನ ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/home-minister-directs-immediate-transfer-of-4-ias-officers-to-assist-delhi-govt-amidst-covid-19-736469.html" target="_blank">ಕೊರೋನಾ: ನಾಲ್ವರು ಐಎಎಸ್ ಅಧಿಕಾರಿಗಳನ್ನು ದೆಹಲಿಗೆ ವರ್ಗಾಯಿಸಿದ ಅಮಿತ್ ಶಾ</a></p>.<p>‘ಪರಸ್ಪರ ಒಮ್ಮತದೊಂದಿಗೆ ಕೊರೊನಾ ವಿರುದ್ಧ ಹೋರಾಡಬೇಕಿದೆ. ಮೋದಿ ಅವರ ನಾಯಕತ್ವದ ಅಡಿಯಲ್ಲಿ ದೇಶದ ರಾಜಧಾನಿಯನ್ನು ಕೊರೊನಾ ಮುಕ್ತಗೊಳಿಸಬೇಕಿದೆ. ಸಹಕಾರ ಮತ್ತು ಒಮ್ಮತದಿಂದ ಇದನ್ನು ಸಾಧಿಸಬಹುದು’ ಎಂದೂ ಅಮಿತ್ ಶಾ ಹೇಳಿದ್ದಾರೆ.</p>.<p>ಕೊರೊನಾ ಬಿಕ್ಕಟ್ಟು ನಿರ್ವಹಣೆಗೆ ದೆಹಲಿ ಸರ್ಕಾರಕ್ಕೆ ನೆರವಾಗಲು ನಾಲ್ವರು ಐಎಎಸ್ ಅಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಭಾನುವಾರ ಸಂಜೆ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಹರಡುವಿಕೆ ಪರಿಶೀಲನೆಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ದೆಹಲಿಯಲ್ಲಿ ಕೊರೊನಾ ಹರಡುವಿಕೆಗೆ ಸಂಬಂಧಿಸಿ ಸರ್ವಪಕ್ಷಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಸಾಂಕ್ರಾಮಿಕದ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ನಾವೆಲ್ಲ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಅಡಿ ಒಗ್ಗಟ್ಟಾಗಿದ್ದೇವೆ’ ಎಂದು ಹೇಳಿದ್ದಾರೆ.</p>.<p>ಮನೆ–ಮನೆ ಸಮೀಕ್ಷೆ, ತೀರಾ ತಳ ಮಟ್ಟದಿಂದ ಸೋಂಕು ಪತ್ತೆ ಪರೀಕ್ಷೆ ಸೇರಿದಂತೆ ಸಭೆಯಲ್ಲಿ ಕೈಗೊಳ್ಳಲಾದ ಎಲ್ಲ ನಿರ್ಧಾರಗಳನ್ನು ಸೂಕ್ತವಾಗಿ ಜಾರಿಗೆ ತರುವಂತೆ ಕೇಂದ್ರ, ದೆಹಲಿ ಸರ್ಕಾರ ಮತ್ತು ದೆಹಲಿಯ ಮೂರು ಪುರಸಭೆ ಆಡಳಿತಗಳಿಗೆ ಶಾ ನಿರ್ದೇಶನ ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/home-minister-directs-immediate-transfer-of-4-ias-officers-to-assist-delhi-govt-amidst-covid-19-736469.html" target="_blank">ಕೊರೋನಾ: ನಾಲ್ವರು ಐಎಎಸ್ ಅಧಿಕಾರಿಗಳನ್ನು ದೆಹಲಿಗೆ ವರ್ಗಾಯಿಸಿದ ಅಮಿತ್ ಶಾ</a></p>.<p>‘ಪರಸ್ಪರ ಒಮ್ಮತದೊಂದಿಗೆ ಕೊರೊನಾ ವಿರುದ್ಧ ಹೋರಾಡಬೇಕಿದೆ. ಮೋದಿ ಅವರ ನಾಯಕತ್ವದ ಅಡಿಯಲ್ಲಿ ದೇಶದ ರಾಜಧಾನಿಯನ್ನು ಕೊರೊನಾ ಮುಕ್ತಗೊಳಿಸಬೇಕಿದೆ. ಸಹಕಾರ ಮತ್ತು ಒಮ್ಮತದಿಂದ ಇದನ್ನು ಸಾಧಿಸಬಹುದು’ ಎಂದೂ ಅಮಿತ್ ಶಾ ಹೇಳಿದ್ದಾರೆ.</p>.<p>ಕೊರೊನಾ ಬಿಕ್ಕಟ್ಟು ನಿರ್ವಹಣೆಗೆ ದೆಹಲಿ ಸರ್ಕಾರಕ್ಕೆ ನೆರವಾಗಲು ನಾಲ್ವರು ಐಎಎಸ್ ಅಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಭಾನುವಾರ ಸಂಜೆ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>