ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್‌ಗೆ ಶಸ್ತ್ರಪೂಜೆ ಮಾಡಿದರೆ ತಪ್ಪೇನಿದೆ?: ಅಮಿತ್ ಶಾ

Last Updated 9 ಅಕ್ಟೋಬರ್ 2019, 12:31 IST
ಅಕ್ಷರ ಗಾತ್ರ

ನವದೆಹಲಿ: ಮಂಗಳವಾರ ಪ್ಯಾರಿಸ್‌ನಲ್ಲಿ ರಫೇಲ್ ಯುದ್ಧ ಯುದ್ಧ ವಿಮಾನ ಹಸ್ತಾಂತರದ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಮಾನಕ್ಕೆ ‘ಶಸ್ತ್ರ ಪೂಜೆ’ ಸಲ್ಲಿಸಿದ್ದರು. ಶಸ್ತ್ರ ಪೂಜೆ ಬಗ್ಗೆ ಕಾಂಗ್ರೆಸ್ ಟೀಕಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಪಕ್ಷವು ಟೀಕೆ ಮಾಡುವ ಮುನ್ನ ಸ್ವಯಂ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ನಿನ್ನೆ ಫ್ರಾನ್ಸ್‌ನಲ್ಲಿ ರಾಜನಾಥ್ ಸಿಂಗ್ ರಫೇಲ್ ಯುದ್ಧ ವಿಮಾನಕ್ಕೆ ಶಸ್ತ್ರಪೂಜೆ ಮಾಡಿದ್ದರು. ಕಾಂಗ್ರೆಸ್‌ಗೆ ಅದು ಇಷ್ಟವಾಗಲಿಲ್ಲ. ವಿಜಯದಶಮಿಯಂದು ಶಸ್ತ್ರ ಪೂಜೆ ಮಾಡುವುದಿಲ್ಲವೇ? ಯಾವ ವಿಷಯವನ್ನು ಟೀಕಿಸಬೇಕು ಎಂಬುದರ ಬಗ್ಗೆ ಅವರು ಯೋಚಿಸುವುದೊಳಿತು ಎಂದು ಹರ್ಯಾಣದ ಕೈತಾಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿಶಾ ಹೇಳಿದ್ದಾರೆ. ಹರ್ಯಾಣದಲ್ಲಿ ಅಕ್ಟೋಬರ್ 21ರಂದು ವಿಧಾನಸಭಾ ಚುನಾವಣೆ ನಡೆಯಲಿದೆ.

ಕಾಂಗ್ರೆಸ್‌ಗೆ ಭಾರತೀಯ ಆಚಾರ ಮತ್ತು ಸಂಪ್ರದಾಯದ ಬಗ್ಗೆ ವಿರೋಧವಿದೆ. ವಾಯುಪಡೆ ಆಧುನೀಕರಣಗೊಳ್ಳುವುದರ ಬಗ್ಗೆಯೂ ಅವರಿಗೆ ಅಸಮಾಧಾನ ಇದೆ ಎಂದು ಬಿಜೆಪಿ ಆರೋಪಿಸಿದೆ.

ಕ್ವಟ್ರೋಚಿ ಅವರನ್ನು ಆರಾಧಿಸುವ ಪಕ್ಷಕ್ಕೆ ಶಸ್ತ್ರಪೂಜೆ ಸಹಜವಾಗಿಯೇ ಸಮಸ್ಯೆ ಆಗಿರುತ್ತದೆ ಎಂದು ಬಿಜೆಪಿ ಟ್ವೀಟಿಸಿದೆ.

ಕಾಂಗ್ರೆಸ್‌ನ ಬೋಫೋರ್ಸ್ ಹಗರಣದ ಬಗ್ಗೆ ಟೀಕಿಸಿದ ಬಿಜೆಪಿ, ಬೋಫೋರ್ಸ್ ಹಗರಣವನ್ನು ಮತ್ತೆ ನೆನಪಿಸಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದಗಳು ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT