ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ನೀಡುವ ಮಸೂದೆಯನ್ನು ಬುಧವಾರ ರಾಜ್ಯಸಭೆಯಲ್ಲಿ ಮಂಡಿಸಿ ಮಾತನಾಡಿ ಅವರು, ‘ಈ ಮಸೂದೆ ಬಗ್ಗೆ ಯಾರಾದರೂ ಬೆದರಿಸಲು ಯತ್ನಿಸಿದರೆ ದೇಶದ ಮುಸ್ಲಿಮರು ಅದಕ್ಕೆ ಕಿವಿಗೊಡಬೇಡಿ. ಈ ಮೋದಿ ಸರ್ಕಾರವು ಸಂವಿಧಾನಕ್ಕೆ ಬದ್ಧವಾಗಿಯೇ ಕೆಲಸ ಮಾಡುತ್ತದೆ. ಅಲ್ಪಸಂಖ್ಯಾತರಿಗೆ ಪೂರ್ತಿ ರಕ್ಷಣೆ ದೊರೆಯಲಿದೆ’ ಎಂದು ಭರವಸೆ ನೀಡಿದರು.