<p class="title"><strong>ನವದೆಹಲಿ:</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಕೇಂದ್ರ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಗಡಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಕುರಿತು ಚರ್ಚೆ ನಡೆಸಿದರು.</p>.<p class="title">ಲೋಧಿ ರಸ್ತೆಯಲ್ಲಿರುವ ಸಿಜಿಒ ಕಾಂಪ್ಲೆಕ್ಸ್ನಲ್ಲಿ ಗೃಹ ಸಚಿವರು ನಾಲ್ಕು ಗಂಟೆಗಳ ಕಾಲ ಮಾತುಕತೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ನಂತರ ಮೊದಲ ಬಾರಿಗೆ ದೇಶದ ಅತಿ ದೊಡ್ಡ ಸೇನಾಪಡೆಯ ಕಚೇರಿಗೆ ಶಾ ಭೇಟಿ ನೀಡಿದ್ದರು. ಡಿಸೆಂಬರ್ 1ರಂದು ನಡೆದ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿರಲಿಲ್ಲ.</p>.<p>ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಗಡಿಯಲ್ಲಿ ಯೋಧರ ನಿಯೋಜನೆಯ ಕುರಿತು ಗೃಹ ಸಚಿವರಿಗೆ ಸಂಪೂರ್ಣ ವಿವರ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಗಡಿಯಲ್ಲಿ ಸ್ಥಾಪಿಸಲಾಗಿರುವ ತಾಂತ್ರಿಕ ಸಾಧನ, ಪಾಕಿಸ್ತಾನ ಗಡಿಯಲ್ಲಿ ಈಚೆಗೆ ಕೈಗೊಂಡ ಕಾರ್ಯಾಚರಣೆ, ನುಸುಳುವಿಕೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಷಾ ಮಾಹಿತಿ ಪಡೆದುಕೊಂಡರು.</p>.<p>‘ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲು ಹಾಗೂ ಎರಡೂ ದೇಶದ ಗಡಿಯಲ್ಲಿ ಇನ್ನಷ್ಟು ತಾಂತ್ರಿಕ ಸಾಧನ ಅಳವಡಿಸಲು ಸೂಚಿಸಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಕೇಂದ್ರ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಗಡಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಕುರಿತು ಚರ್ಚೆ ನಡೆಸಿದರು.</p>.<p class="title">ಲೋಧಿ ರಸ್ತೆಯಲ್ಲಿರುವ ಸಿಜಿಒ ಕಾಂಪ್ಲೆಕ್ಸ್ನಲ್ಲಿ ಗೃಹ ಸಚಿವರು ನಾಲ್ಕು ಗಂಟೆಗಳ ಕಾಲ ಮಾತುಕತೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ನಂತರ ಮೊದಲ ಬಾರಿಗೆ ದೇಶದ ಅತಿ ದೊಡ್ಡ ಸೇನಾಪಡೆಯ ಕಚೇರಿಗೆ ಶಾ ಭೇಟಿ ನೀಡಿದ್ದರು. ಡಿಸೆಂಬರ್ 1ರಂದು ನಡೆದ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿರಲಿಲ್ಲ.</p>.<p>ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಗಡಿಯಲ್ಲಿ ಯೋಧರ ನಿಯೋಜನೆಯ ಕುರಿತು ಗೃಹ ಸಚಿವರಿಗೆ ಸಂಪೂರ್ಣ ವಿವರ ನೀಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಗಡಿಯಲ್ಲಿ ಸ್ಥಾಪಿಸಲಾಗಿರುವ ತಾಂತ್ರಿಕ ಸಾಧನ, ಪಾಕಿಸ್ತಾನ ಗಡಿಯಲ್ಲಿ ಈಚೆಗೆ ಕೈಗೊಂಡ ಕಾರ್ಯಾಚರಣೆ, ನುಸುಳುವಿಕೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಷಾ ಮಾಹಿತಿ ಪಡೆದುಕೊಂಡರು.</p>.<p>‘ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲು ಹಾಗೂ ಎರಡೂ ದೇಶದ ಗಡಿಯಲ್ಲಿ ಇನ್ನಷ್ಟು ತಾಂತ್ರಿಕ ಸಾಧನ ಅಳವಡಿಸಲು ಸೂಚಿಸಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>