ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕ ರೈಲಿಗೆ ತಡೆ: ಮಮತಾ ಬ್ಯಾನರ್ಜಿ ವಿರುದ್ಧ ಅಮಿತ್ ಶಾ ಅಸಮಾಧಾನ

Last Updated 9 ಮೇ 2020, 6:15 IST
ಅಕ್ಷರ ಗಾತ್ರ

ನವದೆಹಲಿ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಲಸೆ ಕಾರ್ಮಿಕರು ತುಂಬಿದ್ದ ರೈಲನ್ನು ಪಶ್ಚಿಮಬಂಗಾಳದಒಳಬರಲು ಬಿಡದೆ ವಲಸೆ ಕಾರ್ಮಿಕರಿಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ನಿರೀಕ್ಷಿಸಿದಷ್ಟು ಬೆಂಬಲ ಸಿಗುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವಅಮಿತ್ ಶಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧಪತ್ರದ ಮುಖೇನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ವಿವಿಧ ಕಡೆಗಳಿಂದ ದೇಶದ ಹಲವು ಕಡೆಗಳಿಗೆ ಕೆಲಸಕ್ಕಾಗಿ ತೆರಳಿದ್ದ 2 ಲಕ್ಷ ವಲಸೆ ಕಾರ್ಮಿಕರುಲಾಕ್‌ಡೌನ್ ಸಂಬಂಧ ತಮ್ಮ ತವರು ರಾಜ್ಯಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರ ಎಲ್ಲಾ ವ್ಯವಸ್ಥೆ ಮಾಡಿದೆ.ಆದರೆ, ಪಶ್ಚಿಮ ಬಂಗಾಳ ಸರ್ಕಾರ ವಲಸೆ ಕಾರ್ಮಿಕರಿದ್ದ ರೈಲುಪ್ರವೇಶ ನಿರ್ಬಂಧ ವಿಧಿಸಿ ಅಸಹಕಾರ ತೋರಿಸಿದೆ. ಅಲ್ಲದೆ, ಇದು ವಲಸೆ ಕಾರ್ಮಿಕರಿಗೆ ಮಾಡಿದ ಅನ್ಯಾಯ, ಇದು ಮತ್ತೊಂದು ಸಮಸ್ಯೆಯನ್ನು ತಂದೊಡ್ಡುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಕೇಂದ್ರ ಸರ್ಕಾರಗಳ ನಡುವೆ ವಲಸೆ ಕಾರ್ಮಿಕ ಸಮಸ್ಯೆ ಮತ್ತೊಂದು ಅಸಮಾಧಾನಕ್ಕೆ ಕಾರಣವಾಗಿದೆ. ಕೊರೊನಾ ಸೋಂಕನ್ನು ನಿಯಂತ್ರಿಸುವ ಪಶ್ಚಿಮ ಬಂಗಾಳ ರಾಜ್ಯದ ಪ್ರಯತ್ನಗಳ ನಡುವೆವಲಸೆ ಕಾರ್ಮಿಕರ ಸಮಸ್ಯೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಕೊರೊನಾ ಸೋಂಕಿನಿಂದ ಉಂಟಾದ ಸಾವುಗಳ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಲೇ ಇದ್ದಾರೆ. ಒಂದೆಡೆ ಸಾರ್ವಜನಿಕ ಆರೋಗ್ಯ ಸಮಸ್ಯೆಯನ್ನು ಕೇಂದ್ರ ಸರ್ಕಾರ ರಾಜಕೀಯವನ್ನಾಗಿ ಪರಿವರ್ತಿಸಲು ಯತ್ನಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದರೆ,ಮತ್ತೊಂದು ಕಡೆ ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಹೊರಡಿಸುವನಿಯಮಗಳನ್ನು ಜಾರಿಗೆ ತರದೆ ಪಶ್ಚಿಮಬಂಗಾಳ ಅಧಿಕಾರಿಗಳುನಿರ್ಲಕ್ಷ್ಯ ತೋರಿಸುತ್ತಿದ್ದಾರೆಎಂದು ಕೇಂದ್ರ ಆರೋಪಿಸುತ್ತಿದೆ.

ಪಶ್ಚಿಮ ಬಂಗಾಳ ಸರ್ಕಾರದಲ್ಲಿ ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಸಮರ್ಪಕ ಪರೀಕ್ಷೆಗಳನ್ನು ನಡೆಸಲು ಹಾಗೂ ಹಾಟ್ ಸ್ಪಾಟ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿಲ್ಲ ಎಂದು ಕೇಂದ್ರದ ಅಧಿಕಾರಿಗಳು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT