‘ಶಿಸ್ತು, ನಾಗರಿಕತೆ, ಸಾಮಾಜಿಕತೆ ಮತ್ತು ನೈತಿಕತೆ ಬಗ್ಗೆ ಪ್ರಾಥಮಿಕ ಶಿಕ್ಷಣ ಹಂತದಲ್ಲೇ ಗಮನಹರಿಸಬೇಕು. ನಮ್ಮ ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ದುರ್ಬಲರಾಗಿದ್ದಾರೆ. ಅವರಿಗೆ ವಿಶೇಷ ರಕ್ಷಣೆ ನೀಡಬೇಕಾದ ಅಗತ್ಯವಿದೆ. ನಮ್ಮ ದೇಶದಲ್ಲಿ ಹೆಚ್ಚಿನ ಉದ್ಯೋಗ ಕ್ಷೇತ್ರಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚುತ್ತಿರುವುದು ಸಂತಸದ ವಿಚಾರ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳದಿದ್ದರೆ, ಅವರಿಗೆ ಸೂಕ್ತ ರಕ್ಷಣೆ ಒದಗಿಸದಿದ್ದರೆ ಅದು ಸರಿಪಡಿಸಲಾರದ ಕಳಂಕವಾದೀತು’ ಎಂದು ಬಚ್ಚನ್ ಹೇಳಿದ್ದಾರೆ.