ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೆ ಶಿರಚ್ಛೇದ, ಈಗ ಬಿಡುಗಡೆ: ಶಾ

Last Updated 5 ಮಾರ್ಚ್ 2019, 19:00 IST
ಅಕ್ಷರ ಗಾತ್ರ

ಗೊಡ್ಡಾ, ಜಾರ್ಖಂಡ್: ‘ಪಾಕಿಸ್ತಾನ ಈ ಮೊದಲು ಯೋಧರ ಶಿರಚ್ಛೇದ ಮಾಡಿ ಮೃತದೇಹವನ್ನು ಭಾರತಕ್ಕೆ ಕಳುಹಿಸುತ್ತಿತ್ತು. ಆದರೆ ಈಗ, ತನ್ನ ವಶದಲ್ಲಿದ್ದ ಭಾರತೀಯ ಪೈಲಟ್‌ನನ್ನು ಕೇವಲ 48 ಗಂಟೆಯೊಳಗೆ ಅದು ಬಿಡುಗಡೆ ಮಾಡಿದೆ’ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಭಾರತದ ಬದಲಾದ ಪ್ರತಿಕ್ರಿಯೆಯನ್ನು ಶಾ ಅವರು ಒತ್ತಿ ಹೇಳಿದರು.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಒಳಗೇ ಹೊಕ್ಕು ಜೈಷ್‌ ಎ ಮೊಹಮ್ಮದ್‌ ಉಗ್ರರ ಶಿಬಿರಗಳನ್ನು ನಾಶಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಸಾಬೀತುಪಡಿಸಿದೆ ಎಂದು ಅವರು ಹೇಳಿದ್ದಾರೆ.

‘ಈ ಹಿಂದೆ ಉಗ್ರರು ಸ್ಫೋಟಕಗಳನ್ನು ಇರಿಸಿ ಪರಾರಿಯಾಗುತ್ತಿದ್ದರು. ಆದರೆ ಇದೀಗ ಪ್ರತಿಯೊಂದು ಭಯೋತ್ಪಾದಕ ಕೃತ್ಯಗಳಿಗೂ ತಕ್ಕ ಉತ್ತರ ನೀಡಲಾಗುತ್ತಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT