ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 'ಅಂಪನ್ ಚಂಡಮಾರುತ ಒಂದು ವಿಪತ್ತಾಗಿದೆ. ರಾಜಕೀಯ ಮಾಡಲು ಇದು ಸರಿಯಾದ ಸಮಯವಲ್ಲ. ಅಂಪನ್ ಚಂಡಮಾರುತದಿಂದಾಗಿ ಕಡಿತಗೊಂಡಿರುವ ವಿದ್ಯುತ್ ಸಂಪರ್ಕವನ್ನು ಒದಗಿಸುವ ನಿಟ್ಟಿನಲ್ಲಿ ನಾವು ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಕೋಲ್ಕತ್ತ ವಿದ್ಯುತ್ ನಿಗಮದೊಂದಿಗೆ ಮಾತುಕತೆ ನಡೆಸಿದ್ದೇವೆ. ಜನರು ತಾಳ್ಮೆ ಕಾಪಾಡಿಕೊಳ್ಳುವಂತೆ ನಾನು ವಿನಂತಿಸುತ್ತೇನೆ' ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.