ಅಮೃತಸರದನಿರಂಕಾರಿ ಮಂದಿರದ ಬಳಿ ನಡೆದ ದಾಳಿಗೆ ಸಂಬಂಧಿಸಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಮಂಗಳವಾರ ದೆಹಲಿಯಲ್ಲಿ ಸಭೆ ಕರೆದಿದ್ದರು. ದಾಳಿಗೆ ಪಾಕಿಸ್ತಾನದಲ್ಲೇ ಸಂಚು ರೂಪಿಸಲಾಗಿದೆ ಹಾಗೂ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐನ ನೇರ ಕೈವಾಡವಿದೆ ಎಂಬ ಬಗ್ಗೆ ಈ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ. ಗೃಹ ಕಾರ್ಯದರ್ಶಿ ರಾಜೀವ್ ಗೌಬಾ, ಪಂಜಾಬ್ ಡಿಜಿಪಿ ಸುರೇಶ್ ಅರೋರಾ ಮತ್ತು ಗುಪ್ತಚರ ಏಜೆನ್ಸಿಗಳ ಮುಖ್ಯಸ್ಥರು ಸಭೆಯಲ್ಲಿ ಹಾಜರಿದ್ದರು.