ಚಂಡಿಗಡ:‘ಅಮೃತಸರದಲ್ಲಿ ಭಾನುವಾರ ನಡೆದ ಗ್ರೆನೇಡ್ ದಾಳಿಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ಸಿಂಗ್ ಹೇಳಿದರು.
‘ಬಿಕ್ರಮಜಿತ್ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಅವತಾರ್ ಸಿಂಗ್ ಶೋಧಕ್ಕಾಗಿ ಜಾಲ ಬೀಸಲಾಗಿದೆ’ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ಬುಧವಾರ ತಿಳಿಸಿದರು.
ಇಬ್ಬರು ಆರೋಪಿಗಳ ಭಾವಚಿತ್ರಗಳನ್ನು ಪ್ರದರ್ಶಿಸಿದ ಅವರು, ‘ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪಾಕಿಸ್ತಾನದ ಐಎಸ್ಐ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಗ್ರೆನೇಡ್ ದಾಳಿ ಸಹ ಇದರ ಭಾಗವಾಗಿ ನಡೆಸಿರುವ ಭಯೋತ್ಪಾದನಾ ಕೃತ್ಯ’ ಎಂದು ಹೇಳಿದರು.