ಅಧಿಕಾರಿಗಳು ದೆಹಲಿ ಸರ್ಕಾರದೊಂದಿಗೆ ಇನ್ನೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ನಿಲ್ದಾಣದಲ್ಲಿ ಎಷ್ಟು ಕೋಚ್ಗಳನ್ನು ಇರಿಸಬೇಕು ಎಂಬ ನಿರ್ಧಾರ ಪ್ರಕಟಿಸಲಾಗುವುದು. ಬಹುಶಃ ಮಂಗಳವಾರ ಅಥವಾ ಬುಧವಾರದಿಂದ ಈ ಕೋಚ್ಗಳು ರೋಗಿಗಳ ಚಿಕಿತ್ಸೆಗೆ ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.
ಮಾರ್ಚ್ 24ರಂದು ಲಾಕ್ಡೌನ್ ಘೋಷಣೆಯಾದ ಸಂದರ್ಭ ತಮ್ಮ ಊರುಗಳಿಗೆ ಮರಳಲು ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಆನಂದ ವಿಹಾರ್ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಿಗೆ ಲಗ್ಗೆ ಇರಿಸಿದ್ದರಿಂದ ಒಂದು ವಾರಕ್ಕೂ ಅಧಿಕ ಕಾಲ ಸಾಕಷ್ಟು ನೂಕುನುಗ್ಗಲು ಉಂಟಾಗಿತ್ತು.
ದೆಹಲಿಯಲ್ಲಿ ಭಾನುವಾರ 2,224 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಂದೇ ದಿನದಲ್ಲಿ ದಾಖಲಾದ ಅಧಿಕ ಪ್ರಕರಣಗಳ ಸಂಖ್ಯೆ ಇದಾಗಿದೆ. ಇದುವರೆಗೆ ಇಲ್ಲಿ 41,000ಕ್ಕೂ ಅಧಿಕ ಕೋವಿಡ್–19 ಪ್ರಕರಣಗಳು ಕಂಡು ಬಂದಿದ್ದು, 1,327 ಜನ ಸೋಂಕಿಗೆ ಬಲಿಯಾದಂತಾಗಿದೆ