‘ಈಗಾಗಲೇ ಹೈದರಾಬಾದ್ ಕರ್ನಾಟಕ ಭಾಗವು ಅನೇಕ ಸೌಲಭ್ಯಗಳಿಂದ ವಂಚಿತವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಔದ್ಯೋಗಿಕ ದೃಷ್ಟಿಯಿಂದ ಹಿಂದುಳಿದಿದೆ. ಹೀಗಾಗಿ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನದ ವಿಧಿ 371 (ಜೆ) ಅನುಷ್ಠಾನ ಸಮಿತಿಯ ಅಧ್ಯಕ್ಷರನ್ನಾಗಿ ಹೈದರಾಬಾದ್ ಕರ್ನಾಟಕ ಭಾಗದ ಹಿರಿಯ ಶಾಸಕರನ್ನೇ ನೇಮಕ ಮಾಡಬೇಕು’ ಎಂದೂ ಕೋರಿದ್ದಾರೆ.