<p><strong>ಕಡಪ: </strong>ಜನಸೇನಾ ಪಕ್ಷದ ಅಭ್ಯರ್ಥಿ ಮಧುಸೂದನ್ ಗುಪ್ತಾಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಅದನ್ನು ಧ್ವಂಸಗೊಳಿಸಿ ನೆಲಕ್ಕೆ ಬಿಸಾಡಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.</p>.<p>ಅನಂತಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗೂಟಿ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲೇ ಇದ್ದ ಪೊಲೀಸರು ಕೂಡಲೇ ಮಧುಸೂದನ್ ಗುಪ್ತಾ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.</p>.<p>ಮತದಾನ ಆರಂಭವಾಗಿ 90 ನಿಮಿಷಗಳ ಬಳಿಕ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದೆ. ಚುನಾವಣಾ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸಲು ಮುಂದಾದರೂ ಅದು ದರಸ್ತಿಯಾಗದ ಕಾರಣ ಆಕ್ರೋಶಗೊಂಡ ಮಧುಸೂದನ್ ಗುಪ್ತ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಹಿಂದೂಪುರದ ಕೆಲವು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ:</strong>ಚಿತ್ರನಟ ನಂದಮೂರಿ ಬಾಲಕೃಷ್ಣ ಪ್ರತಿನಿಧಿಸುವ ಹಿಂದೂಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರಿಸಲಾಗಿದೆ. ಕುಡಿಯುವ ನೀರು, ರಸ್ತೆ , ಸಾರಿಗೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದಾರೆ.</p>.<p>ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತದಾನ ಬಹಿಷ್ಕರಿಸಿರುವ ಗ್ರಾಮಗಳಿಗೆ ಆಗಮಿಸಿ ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಕೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡಪ: </strong>ಜನಸೇನಾ ಪಕ್ಷದ ಅಭ್ಯರ್ಥಿ ಮಧುಸೂದನ್ ಗುಪ್ತಾಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಅದನ್ನು ಧ್ವಂಸಗೊಳಿಸಿ ನೆಲಕ್ಕೆ ಬಿಸಾಡಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.</p>.<p>ಅನಂತಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗೂಟಿ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲೇ ಇದ್ದ ಪೊಲೀಸರು ಕೂಡಲೇ ಮಧುಸೂದನ್ ಗುಪ್ತಾ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.</p>.<p>ಮತದಾನ ಆರಂಭವಾಗಿ 90 ನಿಮಿಷಗಳ ಬಳಿಕ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದೆ. ಚುನಾವಣಾ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸಲು ಮುಂದಾದರೂ ಅದು ದರಸ್ತಿಯಾಗದ ಕಾರಣ ಆಕ್ರೋಶಗೊಂಡ ಮಧುಸೂದನ್ ಗುಪ್ತ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಹಿಂದೂಪುರದ ಕೆಲವು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ:</strong>ಚಿತ್ರನಟ ನಂದಮೂರಿ ಬಾಲಕೃಷ್ಣ ಪ್ರತಿನಿಧಿಸುವ ಹಿಂದೂಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರಿಸಲಾಗಿದೆ. ಕುಡಿಯುವ ನೀರು, ರಸ್ತೆ , ಸಾರಿಗೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದಾರೆ.</p>.<p>ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತದಾನ ಬಹಿಷ್ಕರಿಸಿರುವ ಗ್ರಾಮಗಳಿಗೆ ಆಗಮಿಸಿ ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಕೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>