ಮುಜಾಫರನಗರ(ಉತ್ತರ ಪ್ರದೇಶ): ದೆಹಲಿ ಹಿಂಸಾಚಾರದಲ್ಲಿ ಸಿಲುಕಿ ಸಾವಿಗೀಡಾಗಿದ್ದ ಐಬಿ ಅಧಿಕಾರಿ ಅಂಕಿತ್ ಶರ್ಮ ಅವರ ಅಂತ್ಯ ಸಂಸ್ಕಾರದಲ್ಲಿ ದೆಹಲಿ ಪೊಲೀಸರು ಹಾಗೂ ಕೇಂದ್ರ ಸಚಿವ ಸಂಜೀವ್ ಬಾಲ್ಯನ್ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ಪಾರ್ಥೀವ ಶರೀರದ ಎದುರು ಅಧಿಕಾರಿಗಳ ಮೌನಾಚರಣೆ
ಫೆ.26ರಂದು ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ಶರ್ಮ ಅವರ ಮೃತದೇಹ ಪತ್ತೆಯಾಗಿತ್ತು. ಕೇಂದ್ರ ಗುಪ್ತಚರವಿಭಾಗದ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕಿತ್ ಶರ್ಮರನ್ನೂ ಚಾಂದ್ ಬಾಗ್ ಪ್ರದೇಶದಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಈ ಸಮಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಅಪರಿಚಿತರು ಅಂಕಿತ್ ಶರ್ಮಾ ಅವರ ಮೇಲೂ ಹಲ್ಲೆ ನಡೆಸಿದ್ದರು. ಆ ಸಮಯದಲ್ಲಿ ಯಾರೂ ಆಸ್ಪತ್ರೆಗೆ ದಾಖಲಿಸಿರಲಿಲ್ಲ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
Muzaffarnagar: Last rites of Intelligence Bureau Officer Ankit Sharma was performed at his native village today. His body was found in North East Delhi's Chand Bagh area on 26th February. Union Minister & MP from Muzaffarnagar, Sanjeev Balyan also participated in the last rites. pic.twitter.com/7uOyfweqrt