ನವದೆಹಲಿ: ‘ಲೋಕಪಾಲ್ ಜಾರಿಯಾಗಿದ್ದರೆ, ರಫೇಲ್ ಹಗರಣವೇ ನಡೆಯುತ್ತಿರಲಿಲ್ಲ’ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ತಿಳಿಸಿದ್ದಾರೆ.
ರೈತರ ವಿವಿಧ ಬೇಡಿಕೆ ಈಡೇರಿಕೆ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಜಾರಿಗೆ ಒತ್ತಾಯಿಸಿ ಇದೇ ಜನವರಿ 30ರಿಂದ ರಾಲೇಗಾಣ್ ಸಿದ್ಧಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
‘ಲೋಕಪಾಲ್ ಹಾಗೂ ಲೋಕಾಯುಕ್ತ ಕಾಯ್ದೆ 2013ನ್ನು ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ತೀರ್ಪಿನ ಹೊರತಾಗಿಯೂ ಸರ್ಕಾರ ಜಾರಿಗೊಳಿಸಿಲ್ಲ. ಇಡೀ ದೇಶವೇ ಅಪಾಯದಲ್ಲಿದ್ದು, ನಿರಂಕುಶ ಪ್ರಭುತ್ವದ ವಾಲುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲೋಕಪಾಲ್ ಜಾರಿಗಾಗಿ ಕಳೆದ ಎಂಟು ವರ್ಷಗಳಲ್ಲಿ ಅಣ್ಣಾ ಹಜಾರೆ ಅವರು ಇದೀಗ ಮೂರನೇ ಬಾರಿ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.