ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ‌ ಸಚಿವರೊಬ್ಬರಿಗೆ ಕೊರೊನಾ ವೈರಸ್‌ ಸೋಂಕು 

Last Updated 25 ಮೇ 2020, 6:10 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸಚಿವರು ಮುಂಬೈ ಮತ್ತು ತಮ್ಮ ಮರಾಠವಾದ ನಡುವೆ ಆಗಾಗ್ಗೆ ಪ್ರಯಾಣಿಸುತ್ತಿದ್ದರು,’ ಎಂದು ಅವರು ಹೇಳಿದರು.

‘ಅವರು ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದಾರೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,’ ಎಂದು ಅಧಿಕಾರಿ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಹಿಂದೆ ಎನ್‌ಸಿಪಿ ಮುಖಂಡ, ವಸತಿ ಸಚಿವ ಜಿತೇಂದ್ರ ಅವದ್ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿತ್ತು. ಎರಡು ವಾರಗಳಿಗಿಂತ ಹೆಚ್ಚು ಕಾಲ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ನಂತರ ಚೇತರಿಸಿಕೊಂಡಿದ್ದರು.

ಇದರೊಂದಿಗೆ ಮಹಾರಾಷ್ಟ್ರದಲ್ಲಿ ಇಬ್ಬರು ಸಚಿವರಿಗೆ ಸೋಂಕು ತಗುಲಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT