ಮುಂಬೈ: ಮಹಾರಾಷ್ಟ್ರ ಸಚಿವ, ಕಾಂಗ್ರೆಸ್ನ ಹಿರಿಯ ಮುಖಂಡರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಸಚಿವರು ಮುಂಬೈ ಮತ್ತು ತಮ್ಮ ಮರಾಠವಾದ ನಡುವೆ ಆಗಾಗ್ಗೆ ಪ್ರಯಾಣಿಸುತ್ತಿದ್ದರು,’ ಎಂದು ಅವರು ಹೇಳಿದರು.
‘ಅವರು ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದಾರೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,’ ಎಂದು ಅಧಿಕಾರಿ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ಹಿಂದೆ ಎನ್ಸಿಪಿ ಮುಖಂಡ, ವಸತಿ ಸಚಿವ ಜಿತೇಂದ್ರ ಅವದ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಎರಡು ವಾರಗಳಿಗಿಂತ ಹೆಚ್ಚು ಕಾಲ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ನಂತರ ಚೇತರಿಸಿಕೊಂಡಿದ್ದರು.
ಇದರೊಂದಿಗೆ ಮಹಾರಾಷ್ಟ್ರದಲ್ಲಿ ಇಬ್ಬರು ಸಚಿವರಿಗೆ ಸೋಂಕು ತಗುಲಿದಂತಾಗಿದೆ.