<p><strong>ಹೈದರಾಬಾದ್:</strong>ರಾಷ್ಟ್ರಮಟ್ಟದಲ್ಲಿ ‘ಬಿಜೆಪಿ ವಿರೋಧಿ ವೇದಿಕೆ’ಯನ್ನು ರೂಪಿಸುವ ಉದ್ದೇಶದಿಂದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಶನಿವಾರ ಮಾತುಕತೆ ನಡೆಸಿದ್ದಾರೆ.</p>.<p>ನವೆಂಬರ್ 1ರಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ನಾಯ್ಡು ಅವರು, ಬಿಜೆಪಿ ವಿರೋಧಿ ವೇದಿಕೆ ರಚನೆ ಬಗ್ಗೆ ಚರ್ಚೆ ನಡೆಸಿದ್ದರು.</p>.<p>ಆ ಚರ್ಚೆಯ ಭಾಗವಾಗಿಯೇ ಗೆಹ್ಲೋಟ್ ಅವರು ಶನಿವಾರ ಅಮರಾವತಿಗೆ ಭೇಟಿ ನೀಡಿದ್ದರು.ದೀರ್ಘ ಮಾತುಕತೆಯ ನಂತರ ಇಬ್ಬರು ನಾಯಕರೂ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.</p>.<p>‘ಬಿಜೆಪಿಯನ್ನು ವಿರೋಧಿಸುವ ಎಲ್ಲಾ ಪಕ್ಷಗಳೂ ಈ ವೇದಿಕೆಗೆ ಬರಬೇಕು. ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡುತ್ತೇನೆ. ವೇದಿಕೆ ರಚನೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇದೇ 22ರಂದು ಸಭೆ ನಡೆಯಲಿದೆ. ಆ ಸಭೆಗೆ ಮಮತಾ ಅವರನ್ನು ಆಹ್ವಾನಿಸಲಿದ್ದೇನೆ’ ಎಂದು ನಾಯ್ಡು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong>ರಾಷ್ಟ್ರಮಟ್ಟದಲ್ಲಿ ‘ಬಿಜೆಪಿ ವಿರೋಧಿ ವೇದಿಕೆ’ಯನ್ನು ರೂಪಿಸುವ ಉದ್ದೇಶದಿಂದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಮತ್ತು ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಶನಿವಾರ ಮಾತುಕತೆ ನಡೆಸಿದ್ದಾರೆ.</p>.<p>ನವೆಂಬರ್ 1ರಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ನಾಯ್ಡು ಅವರು, ಬಿಜೆಪಿ ವಿರೋಧಿ ವೇದಿಕೆ ರಚನೆ ಬಗ್ಗೆ ಚರ್ಚೆ ನಡೆಸಿದ್ದರು.</p>.<p>ಆ ಚರ್ಚೆಯ ಭಾಗವಾಗಿಯೇ ಗೆಹ್ಲೋಟ್ ಅವರು ಶನಿವಾರ ಅಮರಾವತಿಗೆ ಭೇಟಿ ನೀಡಿದ್ದರು.ದೀರ್ಘ ಮಾತುಕತೆಯ ನಂತರ ಇಬ್ಬರು ನಾಯಕರೂ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.</p>.<p>‘ಬಿಜೆಪಿಯನ್ನು ವಿರೋಧಿಸುವ ಎಲ್ಲಾ ಪಕ್ಷಗಳೂ ಈ ವೇದಿಕೆಗೆ ಬರಬೇಕು. ಈ ಸಂಬಂಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡುತ್ತೇನೆ. ವೇದಿಕೆ ರಚನೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇದೇ 22ರಂದು ಸಭೆ ನಡೆಯಲಿದೆ. ಆ ಸಭೆಗೆ ಮಮತಾ ಅವರನ್ನು ಆಹ್ವಾನಿಸಲಿದ್ದೇನೆ’ ಎಂದು ನಾಯ್ಡು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>