<p><strong>ಅಲಹಾಬಾದ್</strong>:<a href="www.prajavani.net/tags/anti-caa-protest" target="_blank">ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ</a> <a href="https://www.prajavani.net/tags/uttar-pradesh" target="_blank">ಉತ್ತರ ಪ್ರದೇಶ</a>ದಲ್ಲಿ 2019 ಡಿಸೆಂಬರ್20 ಮತ್ತು 21ರಂದು ನಡೆದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 22 ಮಂದಿ ಜೀವ ಕಳೆದುಕೊಂಡಿದ್ದಾರೆ. 83 ಮಂದಿಗೆ ಗಾಯಗಳಾಗಿವೆ ಎಂದು ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ನಲ್ಲಿ ಹೇಳಿದೆ.</p>.<p>ಸೋಮವಾರಮುಖ್ಯನ್ಯಾಯಮೂರ್ತಿ ಗೋವಿಂದ್ ಮಾಥುರ್ ಮತ್ತು ನ್ಯಾಯಮೂರ್ತಿ ಸಿದ್ದಾರ್ಥ ಅವರ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ನ್ಯಾಯವಾದಿ ಮನೀಷ್ ಗೋಯೆಲ್, ಸಾರ್ವಜನಿಕ ಆಸ್ತಿಗಳನ್ನು ನಾಶ ಮಾಡಿದ್ದಕ್ಕೆ ಮತ್ತು ಗಲಭೆ ಸೃಷ್ಟಿಸಿದ 883 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇವರ ಪೈಕಿ 561 ಮಂದಿ ಜಾಮೀನು ಪಡೆದು ಹೊರಬಂದಿದ್ದಾರೆ . 322 ಮಂದಿ ಇನ್ನೂ ಜೈಲಿನಲ್ಲಿದ್ದಾರೆ. 111 ಮಂದಿ ಸಲ್ಲಿಸಿದ ಜಾಮೀನು ಅರ್ಜಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದೆ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/yogi-adityanath-justifies-uttar-pradesh-crackdown-anti-caa-protests-693893.html" target="_blank">ಪ್ರತಿಭಟನಾಕಾರರಿಗೆ ಆಘಾತ ನೀಡಿದ್ದೇವೆ: ಸರ್ಕಾರದ ಕ್ರಮ ಸಮರ್ಥಿಸಿದ ಆದಿತ್ಯನಾಥ್</a></p>.<p>ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 45 ಪೊಲೀಸ್ ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಅವರೆಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಪೊಲೀಸರ ವಿರುದ್ಧ 10 ದೂರುಗಳು ದಾಖಲಾಗಿದ್ದು ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ <a href="https://www.prajavani.net/tags/citizenship-amendment-act-0" target="_blank">ಪೌರತ್ವ ತಿದ್ದುಪಡಿ ಕಾಯ್ದೆ</a> ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮಾರ್ಚ್ 18ಕ್ಕೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/technology/viral/pro-pak-slogans-in-meerut-sp-tells-protesters-go-to-pak-if-you-dont-want-to-live-here-693903.html" target="_blank">ಪ್ರತಿಭಟನಾಕಾರರು ಪಾಕ್ಗೆ ಹೋಗಲಿ ಎಂದರೇ ಮೀರತ್ ಎಸ್ಪಿ?</a></p>.<p>ಈ ಬಗ್ಗೆ ಅರ್ಜಿದಾರರು ಮತ್ತು ರಾಜ್ಯ ಸರ್ಕಾರ ತಮ್ಮ ಅಫಿಡವಿಟ್ ಮತ್ತು ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಯಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಹಾಬಾದ್</strong>:<a href="www.prajavani.net/tags/anti-caa-protest" target="_blank">ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ</a> <a href="https://www.prajavani.net/tags/uttar-pradesh" target="_blank">ಉತ್ತರ ಪ್ರದೇಶ</a>ದಲ್ಲಿ 2019 ಡಿಸೆಂಬರ್20 ಮತ್ತು 21ರಂದು ನಡೆದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 22 ಮಂದಿ ಜೀವ ಕಳೆದುಕೊಂಡಿದ್ದಾರೆ. 83 ಮಂದಿಗೆ ಗಾಯಗಳಾಗಿವೆ ಎಂದು ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ನಲ್ಲಿ ಹೇಳಿದೆ.</p>.<p>ಸೋಮವಾರಮುಖ್ಯನ್ಯಾಯಮೂರ್ತಿ ಗೋವಿಂದ್ ಮಾಥುರ್ ಮತ್ತು ನ್ಯಾಯಮೂರ್ತಿ ಸಿದ್ದಾರ್ಥ ಅವರ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ನ್ಯಾಯವಾದಿ ಮನೀಷ್ ಗೋಯೆಲ್, ಸಾರ್ವಜನಿಕ ಆಸ್ತಿಗಳನ್ನು ನಾಶ ಮಾಡಿದ್ದಕ್ಕೆ ಮತ್ತು ಗಲಭೆ ಸೃಷ್ಟಿಸಿದ 883 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇವರ ಪೈಕಿ 561 ಮಂದಿ ಜಾಮೀನು ಪಡೆದು ಹೊರಬಂದಿದ್ದಾರೆ . 322 ಮಂದಿ ಇನ್ನೂ ಜೈಲಿನಲ್ಲಿದ್ದಾರೆ. 111 ಮಂದಿ ಸಲ್ಲಿಸಿದ ಜಾಮೀನು ಅರ್ಜಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದೆ ಎಂದಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/yogi-adityanath-justifies-uttar-pradesh-crackdown-anti-caa-protests-693893.html" target="_blank">ಪ್ರತಿಭಟನಾಕಾರರಿಗೆ ಆಘಾತ ನೀಡಿದ್ದೇವೆ: ಸರ್ಕಾರದ ಕ್ರಮ ಸಮರ್ಥಿಸಿದ ಆದಿತ್ಯನಾಥ್</a></p>.<p>ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 45 ಪೊಲೀಸ್ ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಅವರೆಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಪೊಲೀಸರ ವಿರುದ್ಧ 10 ದೂರುಗಳು ದಾಖಲಾಗಿದ್ದು ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ <a href="https://www.prajavani.net/tags/citizenship-amendment-act-0" target="_blank">ಪೌರತ್ವ ತಿದ್ದುಪಡಿ ಕಾಯ್ದೆ</a> ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮಾರ್ಚ್ 18ಕ್ಕೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/technology/viral/pro-pak-slogans-in-meerut-sp-tells-protesters-go-to-pak-if-you-dont-want-to-live-here-693903.html" target="_blank">ಪ್ರತಿಭಟನಾಕಾರರು ಪಾಕ್ಗೆ ಹೋಗಲಿ ಎಂದರೇ ಮೀರತ್ ಎಸ್ಪಿ?</a></p>.<p>ಈ ಬಗ್ಗೆ ಅರ್ಜಿದಾರರು ಮತ್ತು ರಾಜ್ಯ ಸರ್ಕಾರ ತಮ್ಮ ಅಫಿಡವಿಟ್ ಮತ್ತು ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಯಪೀಠ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>