ಸೋಮವಾರಮುಖ್ಯನ್ಯಾಯಮೂರ್ತಿ ಗೋವಿಂದ್ ಮಾಥುರ್ ಮತ್ತು ನ್ಯಾಯಮೂರ್ತಿ ಸಿದ್ದಾರ್ಥ ಅವರ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ನ್ಯಾಯವಾದಿ ಮನೀಷ್ ಗೋಯೆಲ್, ಸಾರ್ವಜನಿಕ ಆಸ್ತಿಗಳನ್ನು ನಾಶ ಮಾಡಿದ್ದಕ್ಕೆ ಮತ್ತು ಗಲಭೆ ಸೃಷ್ಟಿಸಿದ 883 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇವರ ಪೈಕಿ 561 ಮಂದಿ ಜಾಮೀನು ಪಡೆದು ಹೊರಬಂದಿದ್ದಾರೆ . 322 ಮಂದಿ ಇನ್ನೂ ಜೈಲಿನಲ್ಲಿದ್ದಾರೆ. 111 ಮಂದಿ ಸಲ್ಲಿಸಿದ ಜಾಮೀನು ಅರ್ಜಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದೆ ಎಂದಿದ್ದಾರೆ.