ಹಾಜಿಪುರ, ಬಿಹಾರ(ಪಿಟಿಐ): ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಲು ಬಿಹಾರಿಗಳು ರಾಷ್ಟ್ರ ರಾಜಧಾನಿಗೆ ಬರುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ನಿತೀಶ್ ಕುಮಾರ್ ಎನ್ನುವವರು ಈ ದೂರು ದಾಖಲಿಸಿದ್ದಾರೆ. ಕೇಜ್ರಿವಾಲ್ ಅವರ ಹೇಳಿಕೆಯಿಂದ ತಮಗೆ ನೋವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ಬಿಹಾರದ ಜನತೆ ₹500 ಟಿಕೆಟ್ ಖರೀದಿಸಿ ದೆಹಲಿಗೆ ಬರುತ್ತಾರೆ. ಬಳಿಕ, ಇಲ್ಲಿ ₹5 ಲಕ್ಷ ಮೌಲ್ಯದ ವೈದ್ಯಕೀಯ ಚಿಕಿತ್ಸೆ ಪಡೆದು ಹಿಂತಿರುಗುತ್ತಾರೆ ಎಂದು ಕೇಜ್ರಿವಾಲ್ ನೀಡಿದ್ದ ಹೇಳಿಕೆಯನ್ನು ಹಿಂದಿ ದಿನಪತ್ರಿಕೆ ವರದಿ ಮಾಡಿದೆ.